ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

Date:

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

- Advertisement -

ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ‘ಮಹೇಶ್ ಮೋಟಾರ್ಸ್‌’ಗೆ ಸೇರಿದ ಅನೇಕ ಸಿಟಿ ಬಸ್ ಮತ್ತು ಜಿಲ್ಲಾ ಬಸ್‌ಗಳು ಪ್ರತಿದಿನವೂ ಸಂಚರಿಸುತ್ತಿದ್ದು, ಜನಪ್ರಿಯವಾಗಿದೆ.

prakash shetty

ಮಧ್ಯಾಹ್ನ ಊಟ ಮಾಡಿ ಕೊಠಡಿಗೆ ತೆರಳಿದ್ದರು
ಇಂದು ಮಧ್ಯಾಹ್ನ ಮನೆಯಲ್ಲಿದ್ದ ಪ್ರಕಾಶ್ ಅವರು, ಊಟ ಮಾಡಿದ ಬಳಿಕ ಕೊಠಡಿಗೆ ತೆರಳಿದ್ದರು. ಮಲಗಿರಬಹುದೆಂದು ಸಂಜೆ ಮನೆ ಮಂದಿ ಎಬ್ಬಿಸಲು ಹೊರಟಾಗ ಕೊಠಡಿಯ ಬಾಗಿಲು ತೆಗೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಘಟನೆ ಸಂಬಂಧ ಕದ್ರಿ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

mahesh bus

ಬೆಚ್ಚಿ ಬೀಳಿಸಿದ ಸುದ್ದಿ
60 ಬಸ್‌ಗಳ ಮಾಲೀಕರಾಗಿರುವ ಹಿನ್ನೆಲೆಯಲ್ಲಿ ಉದ್ಯಮದ ವಿಚಾರದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆ ತನ್ನ ಆಪ್ತ ಸ್ನೇಹಿತರೊಡನೆ ಹೊರಗಡೆ ಸುತ್ತಾಡಿದ್ದ ಪ್ರಕಾಶ್ ಅವರು, ಈ ರೀತಿ ಆತ್ಮಹತ್ಯೆಗೆ ಶರಣಾಗಿರುವುದು ಕರಾವಳಿಗರನ್ನು ಅದರಲ್ಲೂ ಖಾಸಗಿ ಬಸ್‌ ಸಿಬ್ಬಂದಿಗಳನ್ನು ಬೆಚ್ಚಿ ಬೀಳಿಸಿದೆ. ಮಾನಸಿಕ ಒತ್ತಡಕ್ಕೆ ಸಿಲುಕಿ ಈ ರೀತಿ ಮಾಡಿಕೊಂಡಿದ್ದಾರೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮೃತರು ತಂದೆ ಜಯರಾಮ್ ಶೇಖ, ಪತ್ನಿ, ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...