ಪೊಲೀಸರ ರಕ್ಷಣೆಯಲ್ಲೇ ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆ: ಪ್ರಲ್ಹಾದ ಜೋಶಿ

Date:

ಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಪೊಲೀಸರ ರಕ್ಷಣೆ ಪಡೆದೇ ತೊಂದರೆ ಕೊಡುತ್ತಿವೆ ಎಂಬ ಮಾಹಿತಿ ಇದೆ. ಆದರೆ, ನಾನು ಪೊಲೀಸರ ಮೇಲೆ ಆರೋಪ ಮಾಡುವುದಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ. ಜನರಿಗೆ ಕಿರುಕುಳ ನೀಡುವ ಪ್ರಕರಣಗಳು ನಡೆಯುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ದೂರಿದರು.

- Advertisement -

ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನೋಂದಾಯಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮಾತ್ರವೇ ಆರ್‌ಬಿಐ ಮಾರ್ಗಸೂಚಿಗೆ ಒಳಪಡುತ್ತವೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಮುಖ್ಯಮಂತ್ರಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಿಯಮಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

‘ರಾಜ್ಯದಲ್ಲಿ ಏನೇ ನಡೆದರೂ ಅದಕ್ಕೆಲ್ಲಾ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಹಾಕುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಲೇ ಬಂದಿದ್ದಾರೆ. ಮಳೆ ಹೆಚ್ಚಾದರೂ, ಕಡಿಮೆಯಾದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿಯೇ ಕಾರಣ ಎನ್ನುತ್ತಾರೆ. ಇಂತಹ ಬಾಲಿಶ ಹೇಳಿಕೆಗಳನ್ನು ಕೊಡುವುದನ್ನು ಬಿಡಬೇಕು. ಅವರಿಗೆ ಜನರು ಅಧಿಕಾರ ಕೊಟ್ಟಿದ್ದಾರೆ, ಒಳ್ಳೆಯ ಕೆಲಸಗಳನ್ನು ಮಾಡಲಿ. ಅದನ್ನು ಬಿಟ್ಟು ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ನಾಯಕರು ಕುರ್ಚಿ ಜಗಳದಲ್ಲಿ ನಿರತರಾಗಿದ್ದಾರೆ’
ಎಂದು ಟೀಕಿಸಿದರು.

‘ಪೊಲೀಸರಿಗೆ ಅಧಿಕಾರ ಕೊಟ್ಟು ಅದರಲ್ಲಿ ಭ್ರಷ್ಟಾಚಾರ ಆಗಬಾರದು. ಸಮಿತಿ ರಚಿಸಿದರೆ ಅದಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಿ ಮೇಲ್ವಿಚಾರಣೆ ಮಾಡಬೇಕು. ಸಾಲಕ್ಕೆ ಇಂತಿಷ್ಟೆ ಬಡ್ಡಿ ವಿಧಿಸಬೇಕು ಎಂಬುದು ಆರ್‌ಬಿಐ ಮಾರ್ಗಸೂಚಿಯಲ್ಲಿದೆ. ಆದರೆ, ನೋಂದಾಯಿಸದ ಫೈನಾನ್ಸ್ ಕಂಪನಿಗಳು ಸಾಕಷ್ಟಿವೆ. ಅವುಗಳನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

‘ಮುಡಾ ಪ್ರಕರಣದಲ್ಲಿ ಏನಾದರೂ ಮಾಡಿ ತಪ್ಪಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧವಾಗಿ ಹೈಕೋರ್ಟ್‌ಗೆ ಹೋದರು. ಆದರೆ, ರಾಜ್ಯಪಾಲರ ನಡೆಯನ್ನು ಹೈಕೋರ್ಟ್‌ ತಪ್ಪು ಎನ್ನಲಿಲ್ಲ. ಆದರೂ ಸಿದ್ದರಾಮಯ್ಯ ಅನೈತಿಕವಾಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ’ ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...