ಪಹಣಿ ವ್ಯತ್ಯಾಸ ಪ್ರಕರಣಗಳಿಗೆ ಶಾಶ್ವತ ಪರಿಹಾರ ನೀಡಲು ಸಚಿವ ಕೃಷ್ಣಬೈರೇಗೌಡ ತಾಕೀತು

Date:

  • ರಾಜ್ಯಾದ್ಯಂತ ಮರು ಭೂಮಾಪನಕ್ಕೆ (ರೀ ಸರ್ವೇ) ಸೂಚನೆ
  • ಕಂದಾಯ-ಅರಣ್ಯ ಭೂಮಿ ಗಡಿ ಗುರುತಿಸಲು ಸೂಚನೆ

ಸರ್ವೇ ಇಲಾಖೆಯಲ್ಲಿ ಕೆಲವು ಗೊಂದಲಗಳ ಕಾರಣಕ್ಕೆ ರೈತರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪಹಣಿಯ 3 ಮತ್ತು 9 ಕಾಲಂ ಹಾಗೂ ಆಕಾರಬಂದು ಆರ್‌ಟಿಸಿ ವ್ಯತ್ಯಾಸದ ಪ್ರಕರಣಗಳ ಕಾರಣಕ್ಕೆ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗೆ ಅಲೆಯುವಂತಾಗಿದೆ. ಈ ಪ್ರಕರಣಗಳಿಗೆ ಶೀಘ್ರ ಮುಕ್ತಿ ನೀಡಿ ರೈತರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.

ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳು ಹಾಗೂ ಪಹಣಿ 3 ಮತ್ತು 9 ವ್ಯತ್ಯಾಸ (RTC Mismatch)ಗಳ ಬಗ್ಗೆ ಚರ್ಚಿಸುವ ಸಲುವಾಗಿ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯದಲ್ಲಿ ಪಹಣಿ 3 ಮತ್ತು 9 ವ್ಯತ್ಯಾಸವಿರುವ 54,175 ಪ್ರಕರಣಗಳು ದಾಖಲಾಗಿವೆ. ಇನ್ನು ಆಕಾರಬಂದು ಮತ್ತು ಆರ್‌ಟಿಸಿ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಒಟ್ಟು 1,12,865 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಇತ್ಯರ್ಥಕ್ಕಾಗಿ ರೈತರು ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿದ್ದಾರೆ. ಈ ಸಮಸ್ಯೆಗಳಿಗೆ ಮುಕ್ತಿಯೇ ಇಲ್ಲವೇ? ಜನಪ್ರತಿನಿಧಿಗಳಾಗಿ ನಾವು ಅವರಿಗೆ ಏನೆಂದು ಉತ್ತರಿಸಬೇಕು” ಎಂದು ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂದುವರೆದು “ಈ ಎಲ್ಲ ತಿದ್ದುಪಡಿ ಪ್ರಕರಣಗಳಿಗೆ ಅಳತೆಯ ಅವಶ್ಯಕತೆ ಇದೆಯಾ ಎಂಬುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಮತ್ತು ಸರ್ವೇ ಇಲಾಖೆ ತಹಶೀಲ್ದಾರ್ ಗ್ರೇಡ್ ಅಧಿಕಾರಿಗಳಿಗೆ ತಿಂಗಳು ಅಥವಾ ವಾರಕ್ಕೆ ಇಂತಿಷ್ಟು ಪ್ರಕರಣ ಎಂದು ಗುರಿ ನಿಗದಿಪಡಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಅವರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

ಪೋಡಿ ಮುಕ್ತ ಗ್ರಾಮಕ್ಕೆ ಸೂಚನೆ

ಸಭೆಯಲ್ಲಿ ಪೋಡಿ ಮುಕ್ತ ಗ್ರಾಮದ ಬಗ್ಗೆಯೂ ಚರ್ಚಿಸಲಾಯಿತು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, “ ರಾಜ್ಯದಲ್ಲಿ ಈಗಾಗಲೇ 17,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. 14,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸುವುದು ಬಾಕಿ ಇದೆ. ಈಗಾಗಲೇ ರಾಮನಗರ ಜಿಲ್ಲೆಯಲ್ಲಿ “ಡ್ರೋನ್ ತಂತ್ರಜ್ಞಾನ” ಆಧಾರಿತ ಭೂ ಮರು-ಮಾಪನಕ್ಕೆ (ರೀ ಸರ್ವೇ) ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಈ ಪ್ರಯೋಗ ಯಶಸ್ವಿಯಾಗಿದ್ದು, ಇದನ್ನೇ ಆಧರಿಸಿ ರಾಜ್ಯಾದ್ಯಂತ ಮತ್ತೊಮ್ಮೆ ಭೂ ಮರು-ಮಾಪನ ಮಾಡಿ ಪೋಡಿ ಮರು ಅಭಿಯಾನಕ್ಕೆ ಚಾಲನೆ ನೀಡಿ” ಎಂದರು.

ನಮೂನೆ 57 ಅರ್ಜಿ ಇತ್ಯರ್ಥಕ್ಕೂ ಸೂಚನೆ

ನಮೂನೆ 57ರ ಅಡಿಯಲ್ಲಿ ಸಾಗುವಳಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳನ್ನೂ ಕಾನೂನಿನ ಮಿತಿಯೊಳಗೆ ಯಾರ ಪ್ರಭಾವಕ್ಕೂ ಒಳಗಾಗದೆ, ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಿ ಎಂದು ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಈ ನಮೂನೆ 57ರ ಅರ್ಜಿಯ ಅಡಿಯಲ್ಲಿ ಈ ಹಿಂದೆಯೇ ಭೂಮಿ ಮಂಜೂರಾಗಿದ್ದರೆ ಅಧಿಕಾರಿಗಳು ಪೋಡಿ ಮುಕ್ತ ಮಾಡುವ ಅಥವಾ ಏಕ ವ್ಯಕ್ತಿ ಅಡಿಯಲ್ಲಿ ಪೋಡಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಿ; ಮುಂದಿನ ದಿನಗಳಲ್ಲಿ ಫಾರಂ 57ರ ಅರ್ಜಿಗಳನ್ನು ಮಂಜೂರು ಮಾಡುವ ಮುನ್ನ ಭೂಮಿಯನ್ನು ಅಳತೆ ಮಾಡಿ ಮಂಜೂರು ನಕ್ಷೆ ತಯಾರಿಸಿದ ನಂತರ ಸಾಗುವಳಿ ಚೀಟಿ ನೀಡಿ ಪೋಡಿ ಪ್ರಕ್ರಿಯೆ ನಡೆಸಿ ನೋಂದಾಯಿಸಿ ಹಕ್ಕು ದಾಖಲೆಗಳನ್ನು ತಯಾರಿಸಿ ಎಂಬ ಸೂಚನೆಯನ್ನೂ ಅಧಿಕಾರಿಗಳಿಗೆ ರವಾನಿಸಿದರು.

ಕಂದಾಯ-ಅರಣ್ಯ ಗಡಿ ಗುರುತಿಸಿ

ಕಂದಾಯ ಹಾಗೂ ಅರಣ್ಯ ಜಮೀನುಗಳ ನಡುವಿನ ಗಡಿಯ ಬಗ್ಗೆ ಸಾಕಷ್ಟು ಸ್ಪಷ್ಟತೆ ಇಲ್ಲದ ಕಾರಣಕ್ಕೂ ಜನ ಸಾಕಷ್ಟು ತೊಂದರೆಗೆ ಒಳಗಾಗುತ್ತಿದ್ದಾರೆ. ಇಲಾಖೆಗೂ ಇದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಶೀಘ್ರವಾಗಿ ಹಲವಾರು ಸರ್ವೇ ನಂಬರುಗಳಲ್ಲಿ ಹಂಚಿಹೋಗಿರುವ ಅರಣ್ಯ ಹಾಗೂ ಕಂದಾಯ ಭೂಮಿಗಳನ್ನು ಗುರುತಿಸಿ, ಸರ್ವೇ ನಂಬರುಗಳನ್ನು ಶೀಘ್ರವಾಗಿ ಅಳತೆ ಕೈಗೊಂಡು ಗಡಿ ಗುರುತಿಸಿ ದಾಖಲೆಗಳನ್ನು ತಯಾರಿಸಿ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...