BREAKING NEWS | ಸಚಿವ ಶಿವಾನಂದ ಪಾಟೀಲ್ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

Date:

Advertisements

ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

Advertisements

“ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಸವಾಲನ್ನು ಸ್ವೀಕರಿಸಿ ಶಿವಾನಂದ ಪಾಟೀಲ್​ ಅವರು ಶಾಸಕ ಸ್ಥಾನಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್‌ ಸಹ ಸವಾಲು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿದರೆ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಸಭಾಧ್ಯಕ್ಷರಿಗೆ ಕೋರಿದ್ದಾರೆ. ಯತ್ನಾಳ್‌ ಏನು ಮಾಡುತ್ತಾರೆ ನೋಡಬೇಕು” ಎಂದು ಸಚಿವ ಶಿವಾನಂದ ಪಾಟೀಲ್‌ ಅವರ ಆಪ್ತ ಸಹಾಯಕ ಶಂಕರಗೌಡ ಬಿರಾದಾರ್‌ ಈದಿನ ಡಾಟ್‌ ಕಾಮ್‌ಗೆ ತಿಳಿಸಿದರು.

ರಾಜೀನಾಮೆ 1
ಸ್ಪೀಕರ್ ಯು ಟಿ ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ ಶಿವಾನಂದ ಪಾಟೀಲ್

ಎರಡು ದಿನಗಳ ಹಿಂದೆ ಶಿವಾನಂದ ಪಾಟೀಲ್ ಅವರ ವಿರುದ್ಧ ಯತ್ನಾಳ್​ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ” ಎಂದು ಸವಾಲು ಎಸೆದಿದ್ದರು.

ರಾಜೀನಾಮೆ ಪತ್ರ
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X