‘ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; ನನಗೂ 200 ಕೋಟಿ ರೂ. ಡೀಲ್‌ಗೂ ಸಂಬಂಧವಿಲ್ಲ’: ನಟ ಪ್ರಕಾಶ್ ರಾಜ್

Date:

ನಾನು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೇಳುತ್ತಿದ್ದೇನೆ. ಧರ್ಮಸ್ಥಳದ ವಿರುದ್ಧ ಯಾವ ಷಡ್ಯಂತ್ರವನ್ನೂ ಮಾಡಿಲ್ಲ. ನನಗೂ ಆಪಾದಿತ 200 ಕೋಟಿ ರೂ. ಡೀಲ್‌ಗೂ ಯಾವುದೇ ಸಂಬಂಧವಿಲ್ಲ ಎಂದು ನಟ ಪ್ರಕಾಶ್‌ ರಾಜ್ ಹೇಳಿದ್ದಾರೆ.

- Advertisement -

ಇತ್ತೀಚೆಗೆ, ಧರ್ಮಸ್ಥಳ ಪ್ರಕರಣದಲ್ಲಿ ಉಲ್ಟಾ ಹೊಡೆದಿರುವ ಸಾಕ್ಷಿ-ಆರೋಪಿ ಚಿನ್ನಯ್ಯ, ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದು, ತಮಗೆ ಪ್ರಕಾಶ್‌ ರಾಜ್ ಕರೆ ಮಾಡಿದ್ದರು, ‘ಗಿರೀಶ್‌ ಮಟ್ಟಣ್ಣನವರ್ ಹೇಳಿದಂತೆ ಕೇಳು’ ಎಂದಿದ್ದರು ಎಂದು ಆರೋಪಿಸಿದ್ದರು. ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ತಳುಕು ಹಾಕಿರುವ ಕುರಿತು ಇಂದು (ಬುಧವಾರ) ಪತ್ರಿಕಾಗೋಷ್ಠಿ ನಡೆಸಿ ಪ್ರಕಾಶ್‌ ರಾಜ್ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಕೆಲವು ಮಾಧ್ಯಮಗಳು ಈ ಷಡ್ಯಂತ್ರದಲ್ಲಿ ನನ್ನ ಕೈವಾಡ ಇದೆ ಎಂದು ಅವರೇ ಸ್ವತಃ ಘೋಷಿಸಿಬಿಟ್ಟಿದ್ದಾರೆ. ಆದರೆ, ನಾನು ಇದುವರೆಗೆ ಚಿನ್ನಯ್ಯ ಅಥವಾ ಮಟ್ಟಣ್ಣನವರ್ ಸೇರಿದಂತೆ ಯಾರನ್ನೂ ಖುದ್ದಾಗಿ ಭೇಟಿ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಚಿನ್ನಯ್ಯ ಜೊತೆಗಿನ ಫೋನ್‌ ಕರೆಯ ಕುರಿತು ಸ್ಪಷ್ಟನೆ ನೀಡಿದ ಪ್ರಕಾಶ್‌ ರಾಜ್, “ನೀನು ನನ್ನ ಮುಂದೆ ಹೇಳಿದ ಸತ್ಯವನ್ನೇ ಎಸ್‌ಐಟಿ ಮುಂದೆ ಹೋಗಿ ಹೇಳು. ಸತ್ಯ ಹೇಳಿದರೆ ಇಡೀ ಊರೇ ನಿನ್ನನ್ನು ಕೊಂಡಾಡುತ್ತದೆ, ನಾನು ನಿನ್ನನ್ನು ತಬ್ಬಿಕೊಳ್ಳುತ್ತೇನೆ ಎಂದು ಆತನಿಗೆ ಧೈರ್ಯವನ್ನಷ್ಟೇ ಹೇಳಿದ್ದೆ. ಆದರೆ, ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡಲು ನಾನು 200 ಕೋಟಿ ರೂ. ಡೀಲ್ ಕುದುರಿಸಿದ್ದೇನೆ ಎಂಬುದು ಕಪೋಲಕಲ್ಪಿತ. ಅಷ್ಟೊಂದು ದೊಡ್ಡ ಮೊತ್ತವನ್ನು ನಾನೆಲ್ಲಿಂದ ತರಲಿ? ವಿಷಯವನ್ನು ತಿರುಚಿ ನನ್ನನ್ನು ಧರ್ಮ ವಿರೋಧಿ ಎಂದು ಬಿಂಬಿಸಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನನಗೆ ಧರ್ಮಸ್ಥಳದ ಕುರಿತು ಗೌರವವಿದೆ. ಅಂತೆಯೇ, ಅಲ್ಲಿ ನಡೆದ ಹೆಣ್ಣು ಮಕ್ಕಳ ಸಾವುಗಳ ನ್ಯಾಯಕ್ಕಾಗಿ ನಾನು ಧ್ವನಿ ಎತ್ತಿದ್ದೇನೆ. ಧರ್ಮಸ್ಥಳದಲ್ಲಿ ಮೃತಪಟ್ಟ ಹೆಣ್ಣು ಮಕ್ಕಳ ಮೇಲೆ ಯಾರಿಗೂ ಏಕೆ ಕನಿಕರ ಇಲ್ಲ? ಸೌಜನ್ಯ ಸೇರಿದಂತೆ ಅಲ್ಲಿ ಮೃತಪಟ್ಟ ಇತರ ಹೆಣ್ಣು ಮಕ್ಕಳ ಸಾವು ಹೇಗೆ ಸಂಭವಿಸಿತು ಎಂದು ನ್ಯಾಯಕ್ಕಾಗಿ ಪ್ರಶ್ನಿಸುವುದು ತಪ್ಪಾ? ನಾನು ಆ ಸಾವುಗಳ ಕುರಿತು ಪ್ರಶ್ನೆ ಮಾಡಿದ್ದೇನೆಯೇ ಹೊರತು, ಧರ್ಮಸ್ಥಳ ಕ್ಷೇತ್ರದ ವಿರುದ್ಧ ಯಾವುದೇ ಷಡ್ಯಂತ್ರ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...