ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ, ಫೆ.18ರಂದು ಹೋರಾಟ: ಟಿ ಎ ನಾರಾಯಣಗೌಡ

Date:

Advertisements

ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಿಳಿಸಿದ್ದಾರೆ.

ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ‌. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು‌ ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X