ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿ ಹೋರಾಟಕ್ಕೆ ನಮ್ಮ ನಾಡು ನಮ್ಮ ಆಳ್ವಿಕೆ ತಂಡದಿಂದ ಅಭಿಯಾನ

Date:

Advertisements

ಕಳೆದ ಏಳು ತಿಂಗಳುಗಳಿಂದ ರಾಜ್ಯ ಪಠ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಹೋರಾಟ ಮಾಡುತ್ತಿರುವ ನಮ್ಮ ನಾಡು ನಮ್ಮಆಳ್ವಿಕೆ ತಂಡವು ಮುಂದಿನ ಆನ್‌ಲೈನ್‌ ಸಹಿ ಅಭಿಯಾನಕ್ಕೆ ಬೆನ್ನಿಗೆ ನಿಲ್ಲುವಂತೆ ಕೋರಿಕೊಂಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ನಮ್ಮ ನಾಡು ನಮ್ಮಆಳ್ವಿಕೆ ತಂಡ, ಚಿತ್ರಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ಹಾಗೂ ನಮ್ಮ ನಾಡು ನಮ್ಮ ಆಳ್ವಿಕೆಯ ಸದಸ್ಯರಾದ ಕವಿರಾಜ್ ಅವರು ಅಭಿಯಾನಕ್ಕೆ 2024ರಲ್ಲಿ ಚಾಲನೆ ಕೊಟ್ಟಿದ್ದರು ಎಂದು ಹೇಳಿದೆ.

ಚಿತ್ರ ನಿರ್ದೇಶಕರಾದ ಬಿ ಎಮ್ ಗಿರಿರಾಜ್, ನವೆಂಬರ್ 1ರಂದು ಬೆಂಗಳೂರಿನಲ್ಲಿ ಬೈಕ್ ರ್‍ಯಾಲಿಯನ್ನು, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಮಾರು 1 ಲಕ್ಷ ಕರಪತ್ರ ಹಂಚುವುದರ ಮೂಲಕ ಜಾಗೃತಿ ಅಭಿಯಾನ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಸಿದ ಎರಡು ನುಡಿ-ಜಾಗೃತಿಯ ಕಿಡಿ ಸಭೆಯ ಬಗ್ಗೆ ವಿವರಿಸಿದರು.

Advertisements

“ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪರವರನ್ನು ತಂಡವು ಭೇಟಿ ಮಾಡಿ ಸರಕಾರಕ್ಕೆ ಮನವಿ ಸಲ್ಲಿಸಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಿಗೂ ನಮ್ಮ ಮನವಿ ಸಲ್ಲಿಸಿ, ಅವರು ತಮ್ಮ ಟಿಪ್ಪಣಿಯೊಂದಿಗೆ ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದೆ” ಎಂದು ಹೇಳಿದರು.

“ಜೊತೆಗೆ 2023-24 ರ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿಯಲ್ಲಿ ಹಿಂದಿ ಒಂದರಲ್ಲೇ 90,000ಕ್ಕೂ ಹೆಚ್ಚು ಮಕ್ಕಳು ಮೂರನೇ ಬಾಷೆ ಹಿಂದಿ ಒಂದರಲ್ಲೇ ಅನುತ್ತೀರ್ಣರಾಗಿದ್ದು, ಇದು ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ” ಎಂದು ತಿಳಿಸಿದರು.

“ಹಿಂದಿಯನ್ನು ಯಾರೂ ದ್ವೇಷಿಸುತ್ತಿಲ್ಲ. ನಮಗೆ ಹಿಂದಿ ಸಿನಿಮಾ, ಹಾಡುಗಳು ವಯಕ್ತಿಕವಾಗಿ ಇಷ್ಟವಿದ್ದರೂ ಕಲಿಕೆಯಲ್ಲಿ ಕರ್ನಾಟಕದ ಮಕ್ಕಳಿಗೆ ಮೂರನೇ ಭಾಷೆಯು ಹೊರೆಯಾಗಿದೆ. ಇದು ಹಿಂದಿ ಸಾಮ್ರಾಜ್ಯಶಾಹಿಯ ಹಿಂದಿ ಹೇರಿಕೆಯ ಕುತಂತ್ರ” ಎಂದು ಆರೋಪಿಸಿದರು.

ಸಜಿತ್ ಗೌಡ ಮಾತನಾಡಿ, “ಕನ್ನಡ ನೆಲದಲ್ಲಿ ಹಿಂದಿ ಕಡ್ಡಾಯ ಕಲಿಕೆಯು ಸಾಂಸ್ಕೃತಿಕ ದಾಳಿ” ಎಂದು ಹೇಳಿದರು.

ಕನ್ನಡ ಹೋರಾಟಗಾರ ಅರುಣ್ ಜಾವಗಲ್ ಮಾತನಾಡಿ, “ಮೂರನೆಯ ಭಾಷೆಯಾಗಿ ಹಿಂದಿ ಕಲಿಸುವುದು ಹಿಂದಿ ಹೇರಿಕೆಯ ಒಂದು ಭಾಗವಾಗಿದ್ದು ನಾವು ಅದನ್ನು ಹಿಮ್ಮೆಟ್ಟಬೇಕು” ಎಂದು ಹೇಳಿದರು

ಶೃತಿ ಮರುಳಪ್ಪ ಮಾತನಾಡಿ, “ತ್ರಿಭಾಷಾ ಸೂತ್ರವನ್ನು ಉತ್ತರ ಭಾರತದ ರಾಜ್ಯಗಳು ಅಳವಡಿಸಿಕೊಂಡಿಲ್ಲ, ತಮಿಳು ನಾಡು ಹಿಂದಿಯನ್ನು ಒಪ್ಪದೆಯೇ ಉತ್ತಮ ಸಾಮಾಜಿಕ-ಆರ್ಥಿಕ ಏಳಿಗೆ ಸಾಧಿಸಿದೆ, ಮಹಾರಾಷ್ಟ್ರದಲ್ಲಿಯೂ ಅಲ್ಲಿನ ಮುಖ್ಯಮಂತ್ರಿಗಳು ಇಂಗ್ಲಿಶ್ ಮತ್ತು ಮರಾಠಿ ಕಲಿಕೆಯನ್ನು ಪ್ರತಿಪಾಸಿದ್ದಾರೆ. ಕರ್ನಾಟಕದ ಮಕ್ಕಳಿಗೆ ಮಾತ್ರ ಮೂರನೆಯ ಭಾಷೆ ಹೊರೆಯಾಗಿದೆ, ಇದು ಕೊನೆಯಾಗಬೇಕು” ಎಂದು ಹೇಳಿದರು.

ರಮೇಶ್ ಬೆಲ್ಲಂಕೊಂಡ ಮಾತನಾಡಿ, “ಅಭಿಯಾನ ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ದ್ವಿಭಾಷಾ ನೀತಿಯನ್ನು ಆಗ್ರಹಿಸಿ ಶುರುವಾದ ಆನ್ಲೈನ್ ಪಿಟಿಶನ್ನಿಗೆ 25,000ಕ್ಕೂ ಹೆಚ್ಚು ಸಹಿ ಬಂದಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X