ಪ್ರಧಾನಿ, ಎನ್‌ಸಿಬಿಸಿ ಅಧ್ಯಕ್ಷರಿಂದ ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ: ದ್ವಾರಕಾನಾಥ್

Date:

Advertisements

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಹೇಯ ಕೆಲಸ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಸಿ.ಎಸ್. ದ್ವಾರಕಾನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುತ್ತಾ ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಒಬಿಸಿಗಳ ಪಟ್ಟಿಯಲ್ಲೇ ಮುಸ್ಲಿಮರ ಜಾತಿಗಳಿಗೂ ಮೀಸಲಾತಿ ಕಲ್ಪಿಸುವ ಮೂಲಕ ಹಿಂದುಳಿದವರ ಮೀಸಲಾತಿಯನ್ನು ಕಡಿತಗೊಳಿಸಿತ್ತು. ಅದನ್ನು ದೇಶದಾದ್ಯಂತ ವಿಸ್ತರಿಸಲೂ ಯೋಚಿಸಿತ್ತು’ ಎಂದು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅದ್ಯಕ್ಷರಾದ  ಹಂಸರಾಜ್ ಗಂಗಾರಾಮ್ ಅಹಿರ್ ಕೂಡ ಒಂದು ಪತ್ರಿಕಾ ಹೇಳಿಕೆ ನೀಡಿ ಮೋದಿ ಹೇಳಿಕೆಯನ್ನೇ ಪುನರುಚ್ಚರಿಸಿರುವುದು ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ” ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

“ವಿಪರ್ಯಾಸವೆಂದರೆ ಪ್ರಧಾನಿ ಮತ್ತು ಅಹಿರ್ ಇಬ್ಬರೂ ಕರ್ನಾಟಕದ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಕನಿಷ್ಠ ಅರಿವಿಲ್ಲದೆ ಅತ್ಯಂತ ಅಜ್ಞಾನದಿಂದ ಮಾತಾಡಿ ಹಿಂದುಳಿದವರನ್ನು ಮುಸ್ಲಿಮರ ಮೇಲೆ ಎತ್ತಿಕಟ್ಟುವ ಆತುರದಲ್ಲಿ ತಮ್ಮ ಸ್ಮೃತಿಗಳನ್ನೇ ಕಳೆದುಕೊಂಡು ಬೇಕಾಬಿಟ್ಟಿ ಸುಳ್ಳು ಹೇಳಿದ್ದಾರೆ” ಎಂದು ಹರಿಹಾಯ್ದರು.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಮನ್ಸ್

“ಸ್ವಾತಂತ್ರ್ಯ ಪೂರ್ವದ ನಾಲ್ವಡಿ ಕೃಷ್ಣರಾಜ ಒಡೆಯರ್ ನೇಮಿಸಿದ ‘ಮಿಲ್ಲರ್ ಆಯೋಗ’ದಿಂದ ಹಿಡಿದು ಸ್ವಾತಂತ್ರಾ ನಂತರದ ಚಿನ್ನಪ್ಪರೆಡ್ಡಿ ಆಯೋಗ, ವೆಂಕಟಸ್ವಾಮಿ ಆಯೋಗದ ಆದಿಯಾಗಿ ಇಂದಿನ ಎಲ್ಲ ಆಯೋಗಗಳು ಮುಸ್ಲಿಮರನ್ನು “ಹಿಂದುಳಿದ ವರ್ಗಗಳು” ಎಂದೇ ಕರ್ನಾಟಕದಲ್ಲಿ ಗುರುತಿಸಿರುವುದು. ಮುಸ್ಲಿಮರನ್ನು ಎಂದು ಧಾರ್ಮಿಕ ಅಲ್ಪಸಂಖ್ಯಾತರು ಅಥವಾ ‘ರಿಲಿಜಿಯಸ್ ಮೈನಾರಿಟಿ’ ಎಂದು ಗುರುತಿಸಿಲ್ಲ, ಅಂತೆಯೇ ಕ್ರೈಸ್ತರು, ಜೈನರು, ಬೌದ್ದರು, ಸಿಖ್ಖರೂ ಕೂಡ ಹಿಂದುಳಿದ ವರ್ಗಗಳ ಪಟ್ಟಿಯಲ್ಲೇ ಇದ್ದಾರೆ ಎನ್ನುವುದು ಗಮನಾರ್ಹ” ಎಂದು ದ್ವಾರಕಾನಾಥ್‌ ತಿಳಿಸಿದರು.

“ದೇವರಾಜ ಅರಸರು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದರು. ನಂತರ ವೀರಪ್ಪ ಮೊಯ್ಲಿಯವರು ಮುಸ್ಲಿಂ ಸಮುದಾಯಕ್ಕೆ ಶೇ. 4 ರಷ್ಟು ಮೀಸಲಾತಿ ನೀಡಿದರು. ಆದರೆ ದೇವೇಗೌಡರು ತಾವು ಮಾಡಿದ್ದೆಂದು ಹೇಳುತ್ತಿರುವುದೂ ಅಪ್ಪಟ ಸುಳ್ಳು. ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಪ್ರಕಾರ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುತ್ತಾರೆ. ಇಲ್ಲಿ ಜಾತಿ,ಮತ,ಧರ್ಮ ಎಂಬುದಕ್ಕಿಂತಲೂ ಇದೊಂದು ‘ವರ್ಗ’ ಎಂದು ಗುರುತಿಸಲ್ಪಡುತ್ತಾರೆ. ಆದ್ದರಿಂದಲೇ “ಹಿಂದುಳಿದ ವರ್ಗಗಳ ಆಯೋಗ” ಎನ್ನುತಾರೆಯೇ ಹೊರತು “ಹಿಂದುಳಿದ ಜಾತಿಗಳ” ಅಥವಾ “ಹಿಂದುಳಿದ ಮತಗಳ” ಆಯೋಗ ಅನ್ನುವುದಿಲ್ಲ” ಎಂದು ದ್ವಾರಕಾನಾಥ್‌ ವಿವರಿಸಿದರು.

“ಪ್ರಧಾನಮಂತ್ರಿಗಳು ಲೋಕಾಭಿರಾಮವಾಗಿ ಇಂತಹ ಅಪದ್ದಗಳನ್ನು ಮಾತಾಡುವುದನ್ನು ರೂಢಿಸಿಕೊಂಡಿದ್ದಾರೆ. ಇಂತಹ ವಿಷಯಗಳಲ್ಲಿ ಇವರನ್ನು ಯಾರೂ ಗಂಭೀರವಾಗಿ ಪರಿಗಣಿಸದೇ ಇರುವುದರಿಂದ ಅಡ್ಡಿಯಿಲ್ಲ. ಆದರೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈ ಬಗ್ಗೆ ಕನಿಷ್ಠ ಸಣ್ಣ ಸಿದ್ದತೆಯನ್ನೂ ಮಾಡಿಕೊಳ್ಳದೆ ಪತ್ರಿಕಾ ಪ್ರಕಟಣೆ ನೀಡಿರುವುದು ಅಕ್ಷಮ್ಯ. ಅಂದಹಾಗೆ ರಾಷ್ಟ್ರೀಯ ಆಯೋಗಕ್ಕೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೂ ಸಂಬಂಧವೇ ಇಲ್ಲ. ಅವರು ಚಕ್ರವರ್ತಿಗಳೂ ಅಲ್ಲ, ನಾವು ಅವರ ಸಾಮಂತರೂ ಅಲ್ಲ. ನಮಗೆ ನಮ್ಮದೇ ಆದ ಸ್ವಾತಂತ್ರ ಮತ್ತು ಸ್ವಾಯತ್ತತೆ ಇದೆ. ನಾವು ಯಾರ ಅಧೀನದಲ್ಲೂ ಇಲ್ಲ ಎನ್ನುವುದನ್ನು ಇಲ್ಲಿ ಸ್ಪಷ್ಟಪಡಿಸುತ್ತೇವೆ” ಎಂದು ದ್ವಾರಕಾನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X