ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹ: ಹೈಕೋರ್ಟ್‌

Date:

Advertisements

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವು ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾಗಿದೆ. ಆರೋಪವೇ ಇಲ್ಲಎಂಬ ಪ್ರಕರಣ ಇದಲ್ಲ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತಿತರರು ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿ, ವಿಚಾರಣೆಗೆ ಅರ್ಹವಾಗಿರುವ ಪ್ರಕರಣ ಇದು ಎಂದು ಹೇಳಿದೆ.

ವಿಚಾರಣೆಯ ವೇಳೆ ಯಡಿಯೂರಪ್ಪ ಪರ ವಕಾಲತ್ತು ಹಾಕಿರುವ ವಕೀಲ ಸಂದೀಪ್‌ ಪಾಟೀಲ್‌ ಅವರನ್ನು ಉದ್ದೇಶಿಸಿ ನ್ಯಾಯಮೂರ್ತಿಗಳು, “ಪ್ರಕರಣದ ಕಡತ ನೋಡಿದ್ದು, ಮೇಲ್ನೋಟಕ್ಕೆ ವಿಚಾರಣೆಗೆ ಇದು ಅರ್ಹವಾದ ಪ್ರಕರಣ ಎನ್ನುವುದು ನನ್ನ ಪ್ರಾಮಾಣಿಕ ಅಭಿಪ್ರಾಯ. ಪೋಕ್ಸೊ ಪ್ರಕರಣದಲ್ಲಿ ಕೆಲವೊಮ್ಮ ಸಂತ್ರಸ್ತೆಯ ಹೇಳಿಕೆಯೊಂದೇ ಆರೋಪಿಗೆ ಶಿಕ್ಷೆ ವಿಧಿಸಲು ಸಾಕಾಗುತ್ತದೆ. ಸಂತ್ರಸ್ತೆಯ ತಾಯಿ ಏಕೆ ಯಡಿಯೂರಪ್ಪ ಮನೆಗೆ ಬಂದಿದ್ದರು? ಯಡಿಯೂರಪ್ಪ ಸಂತ್ರಸ್ತೆಗೆ ನೀಡಲು ಹಣ ನೀಡಲು ಮುಂದಾಗಿದ್ದೇಕೆ? ಎಂಬೆಲ್ಲಾ ಅಂಶಗಳು ಸಹ ವಿಚಾರಣೆಗೆ ಅರ್ಹವಾಗಿದೆ” ಎಂದು ಹೇಳಿದರು.

“ನಿಮ್ಮ ವಾದ ಆಲಿಸಲಾಗುವುದು. ಯಡಿಯೂರಪ್ಪಗೆ ಇಷ್ಟು ವಯಸ್ಸಾಗಿದೆ. ಅನಗತ್ಯವಾಗಿ ಸಮನ್ಸ್‌ ನೀಡಬಾರದೆಂದು ಕೇಳಿದರೆ ಏನಾದರೂ ಮಾಡಬಹುದು. ಯಡಿಯೂರಪ್ಪ ಪ್ರತಿ ಪಕ್ಷದಲ್ಲಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡುತ್ತಾರೆಂದು ಹೇಳಬಹುದು. ಕಿರುಕುಳ ತಪ್ಪಿಸಿ, ನ್ಯಾಯಯುತ ವಿಚಾರಣೆಗೆ ಸಂಬಂಧಿಸಿದಂತೆ ರಕ್ಷಣೆ ಮಾಡಬಹುದು. ಅಂತಹ ಅಂಶವನ್ನು ಉಲ್ಲೇಖಿಸಿ, ಮೆರಿಟ್‌ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ” ಎಂದು ಪೀಠ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ |ಅಂಧಭಕ್ತರ ಕಿವಿಗೆ ಹೂ ಮುಡಿಸಿದ ಮೋಶಾ ಜೋಡಿ!

ಆಗ ಬಿಎಸ್‌ವೈ ಪರ ವಕೀಲ ಸಂದೀಪ್‌ ಪಾಟೀಲ್‌, “ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬುದು ಅರ್ಥವಾಗುತ್ತದೆ. ಈ ಕುರಿತು ಅರ್ಜಿದಾರರೊಂದಿಧಿಗೆ ಚರ್ಚಿಸಿ, ವಿಚಾರ ತಿಳಿಸಲಾಗುವುದು ” ಎಂದು ಹೇಳಿದರು. ಹಾಗಾಗಿ, ನ್ಯಾಯಾಲಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಇನ್ನು, ರಾಜ್ಯ ಸರಕಾರ, ತನಿಖಾಧಿಕಾರಿಯು ಸಿಆರ್‌ಪಿಸಿ ಸೆಕ್ಷನ್‌ 161ರಡಿ ದಾಖಲಿಸಿಕೊಂಡಿರುವ ಹೇಳಿಕೆಯನ್ನು ಮೆಮೊ ಜತೆಗೆ ಸಲ್ಲಿಸಿತು. ಅದನ್ನು ನ್ಯಾಯಾಲಯ ದಾಖಲೆಯಲ್ಲಿ ಸ್ವೀಕರಿಸಿತು. ಇದಕ್ಕೂ ಮುನ್ನ ಬಿಎಸ್‌ವೈ ಪರ ಸಿ.ವಿ.ನಾಗೇಶ್‌ ಮತ್ತು ಪ್ರಾಸಿಕ್ಯೂಷನ್‌ ಪರ ಎಸ್‌ಪಿಪಿ ಪ್ರೊ.ರವಿವರ್ಮಕುಮಾರ್‌ ಸುದೀರ್ಘ ವಾದ ಮಂಡನೆ ಮಾಡಿದರು.

ಪ್ರಕರಣದ ಹಿನ್ನೆಲೆ

‘ನನ್ನ ಮಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಹಾಯ ಮಾಡಬೇಕು’ ಎಂದು ಬೇಡಿ ಬಂದಿದ್ದ ಸಂತ್ರಸ್ತ ಬಾಲಕಿಯ ತಾಯಿ (ಈಗ ಬದುಕಿಲ್ಲ) ನೀಡಿದ್ದ ದೂರಿನ ಅನುಸಾರ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್‌ಎಂವಿ ಎರಡನೇ ಹಂತದಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ‘ಧವಳಗಿರಿ’ ನಿವಾಸದಲ್ಲಿ 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X