ರಾಮನಗರ: ದಲಿತ ಯುವಕನ ಕೈಕಡಿದ ರೌಡಿಗಳ ಕಾಲಿಗೆ ಗುಂಡೇಟು

Date:

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು ಭಾನುವಾರ ಬೆಳಿಗ್ಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಗೊಂಡಿರುವ ಆರೋಪಿಗಳಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಕೃತ್ಯದ ಬಳಿಕ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗಳಿಬ್ಬರು, ಕಗ್ಗಲಿಪುರ ಬಳಿಯ ವ್ಯಾಲಿ ಸ್ಕೂಲ್ ರಸ್ತೆ ಬಳಿ ಬಚ್ಚಿಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಲು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕನಕಪುರ ಟೌನ್ ಠಾಣೆ ಪಿಐ ಮಿಥುನ್ ಶಿಲ್ಪಿ, ಗ್ರಾಮಾಂತರ ಪಿಐ ಕೃಷ್ಣ ಲಮಾಣಿ, ಪಿಎಸ್ಐಗಳಾದ ಮನೋಹರ್, ರವಿಕುಮಾರ್, ಕಾನ್‌ಸ್ಟೆಟೇಬಲ್‌ಗಳಾದ ರಾಜಶೇಖರ್ ಹಾಗೂ ಶಿವಕುಮಾರ್ ಸ್ಥಳಕ್ಕೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆರೋಪಿಗಳಿದ್ದ ಸ್ಥಳವನ್ನು ಪೊಲೀಸರು ಸುತ್ತುವರಿಯುತ್ತಿದ್ದಂತೆ, ಆರೋಪಿಗಳಿಬ್ಬರು ಸಿಬ್ಬಂದಿ ರಾಜಶೇಖರ್ ಮತ್ತು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪಾರಾಗಲು ಯತ್ನಿಸಿದರು. ಆಗ ಗಾಳಿಯಲ್ಲಿ ಗುಂಡು ಹಾರಿಸಿದ ಪಿಐ ಮಿಥುನ್ ಶಿಲ್ಪಿ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

‘ಎಚ್ಚರಿಕೆ ಲೆಕ್ಕಿಸದೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಹರ್ಷ ಕಾಲಿಗೆ ಮಿಥುನ್ ಶಿಲ್ಪಿ ಮತ್ತು ಕರುಣೇಶ್ ಕಾಲಿಗೆ ಪಿಎಸ್ಐ ಮನೋಹರ್ ಗುಂಡು ಹಾರಿಸಿದರು. ಸ್ಥಳದಲ್ಲೇ ಕುಸಿದು ಬಿದ್ದ ಇಬ್ಬರನ್ನೂ ವಶಕ್ಕೆ ಪಡೆದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು’ ಎಂದು ಹೇಳಿದರು.

‘ಆರೋಪಿಗಳ ವಿರುದ್ದ ಕನಕಪುರ ಟೌನ್, ಗ್ರಾಮಾಂತರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೊಲೆ ಯತ್ನ, ಪರಿಶಿಷ್ಟರ ಮೇಲೆ ದೌರ್ಜನ್ಯ ಸೇರಿದಂತೆ ಐದು ಪ್ರಕರಣಗಳಿವೆ. ಆಸ್ಪತ್ರೆಯಲ್ಲಿರುವ ಆರೋಪಿಗಳು ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುವುದು. ಕೃತ್ಯದಲ್ಲಿ ಒಟ್ಟು 7 ಮಂದಿ ಭಾಗಿಯಾಗಿದ್ದು, ಘಟನೆ ನಡೆದ ಮಾರನೇ ದಿನವೇ ಐವರನ್ನು ಬಂಧಿಸಲಾಗಿತ್ತು’ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಗೆ ಕಾರ್ತಿಕ್ ರೆಡ್ಡಿ ಮತ್ತು ಬಂಧನ ಕಾರ್ಯಾಚರಣೆ ತಂಡ ಮೇಲ್ವಿಚಾರಣೆ ನಡೆಸುತ್ತಿದ್ದ ಚನ್ನಪಟ್ಟಣ ಡಿವೈಎಸ್ಪಿ ಕೆ ಸಿ ಗಿರಿ ಭೇಟಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...