ಪೊಲೀಸರ ಅಮಾನತು | ಸಿದ್ದರಾಮಯ್ಯರಿಂದ ಹೇಡಿತನದ ನಡೆ: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟೀಕೆ

Date:

Advertisements

ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಇಷ್ಟು ಅಸಹಾಯಕರಾಗಿ, ಹೇಡಿಯಂತೆ ಹಾಗೂ ಆತಂಕದಿಂದ ಈವರೆಗೂ ಯಾವ ಮುಖ್ಯಮಂತ್ರಿಯೂ ವರ್ತಿಸಿಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಟೀಕಿಸಿದ್ದಾರೆ.

ಆರ್​​ಸಿಬಿ ಐಪಿಎಲ್ ವಿಜಯದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರ ಅಮಾನತು ನಿರ್ಧಾರ ಕರ್ನಾಟಕದ ಪೊಲೀಸ್ ಇತಿಹಾಸದಲ್ಲಿ ಕರಾಳ ದಿನ ಎಂದು ಭಾಸ್ಕರ್ ರಾವ್ ಬಣ್ಣಿಸಿದ್ದಾರೆ.

“ಅನಿಯಂತ್ರಿತ ಉಪಮುಖ್ಯಮಂತ್ರಿಗಳೇ ಸಾವಿನ ವಿಜಯೋತ್ಸವ ಆಯೋಜಿಸಿದ್ದಾರೆ. ಅವರೇ ಪ್ರಮುಖ ತಪ್ಪಿತಸ್ಥ ಎಂಬುದು ಕರ್ನಾಟಕದ ಪ್ರತಿಯೊಬ್ಬರಿಗೂ ತಿಳಿದಿದೆ. ಈವರೆಗೂ ಯಾವೊಬ್ಬ ಮುಖ್ಯಮಂತ್ರಿ ಕೂಡ ಈ ಮಟ್ಟಕ್ಕೆ ಅಸಹಾಯಕರಾಗಿ, ಹೇಡಿಯಂತೆ ಮತ್ತು ಆತಂಕದಿಂದ ವರ್ತಿಸಿದ್ದು ನಾನು ನೋಡಿಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಬೆಂಗಳೂರನ್ನು ಸುರಕ್ಷಿತವಾಗಿ ಇಡುವುದಕ್ಕೆ ಪೊಲೀಸ್ ಆಯುಕ್ತರು ಮತ್ತು ಅವರ ತಂಡ ರಾತ್ರಿ ಇಡೀ ಶ್ರಮಿಸಿದೆ. ಇದಕ್ಕೆ ಮತ್ತು ಸತ್ಯ ಹೇಳಿದ್ದಕ್ಕೆ ಪೊಲೀಸ್ ಆಯುಕ್ತರಿಗೆ ದೊರೆತ ಬಹುಮಾನ ‘ಅಮಾನತು’ ಆಗಿದೆ” ಎಂದು ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಪೋಲೀಸ್ ಅಧಿಕಾರಿ ಪಕ್ಷ ಸೇರಿ ಆ ಹುದ್ದೆಯ ಘನತೆ ಗೌರವಗಳನ್ನು ಜುಮ್ಲಾ ವ್ಯಾಪಾರಿಗಳ ಪಾದಕ್ಕೆ ಸಮರ್ಪಿಸಿದರು,,ಇವರದೇ ಪಕ್ಷದವರು ಪೋಲೀಸ್ ಇಲಾಖೆ ತನ್ನ ಕೆಲಸ ಮಾಡಲಿಲ್ಲ ಅಂತಾ ಬೊಬ್ಬೆ ಹೊಡೆದರು,, ಉತ್ತರ ಪ್ರದೇಶದಲ್ಲಿ ಕುಂಭಮೇಳ ಮತ್ತು ಬಾಬಾನ ಹುಚ್ಚಾಟಕ್ಕೆ ನೂರಾರು ಮಂದಿ ಅಮಾಯಕ ಹಿಂದೂಗಳ ಪ್ರಾಣ ಹೋಯಿತು ಆವಾಗ ಯಾವಾಗ ಮೋಡ್ ನಲ್ಲಿ ಇದ್ದರು ಮಾಜಿ ಐಪಿಎಸ್ ಹಾಲಿ ಬಿಜೆಪಿ ನಾಯಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X