ದೆಹಲಿ: ಪ್ರತಿಭಟನಾನಿರತ ಸೌಜನ್ಯ ತಾಯಿ ಹಾಗೂ ಹೋರಾಟಗಾರರು ಪೊಲೀಸ್ ವಶಕ್ಕೆ

Date:

Advertisements

ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಸಂಸದ ಆಗಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್, ಹರೀಶ್ ಪೂಂಜಾ ಇದ್ದ ವೇದಿಕೆಯಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ತಮ್ಮ ಭಾಷಣದಲ್ಲಿ ನನ್ನನ್ನು ಪ್ರಧಾನಿ ಮೋದಿ ಅವರಿಗೆ ಭೇಟಿ ಮಾಡಿಸಬೇಕು ಎಂದಿದ್ದರು.

ಅದಕ್ಕೆ ಅಲ್ಲಿದ್ದ ನಾಯಕರು ಒಪ್ಪಿಗೆ ಸೂಚಿಸಿದ್ದರು. ಆದರೆ ಪ್ರತಿಭಟನೆ ನಡೆದು ಹಲವು ತಿಂಗಳು ಕಳೆದರೂ ಬಿಜೆಪಿ ನಾಯಕರು ನೀಡಿದ ಅಶ್ವಾಸನೆ ಈಡೇರಿಸದ ಕಾರಣ ಇದೀಗ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಹೋರಾಟಗಾರರ ತಂಡ ದೆಹಲಿಗೆ ಹೋಗಿ ಅಲ್ಲಿ ಕರ್ನಾಟಕ ಭವನದ ಎದುರು ಮಾ.1 ರಂದು ಪ್ರತಿಭಟನೆ ಕೈಗೊಂಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಇಂದು ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ ತಂಡ ಅವರ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ತನಿಖೆಗೆ ಒತ್ತಾಯಿಸಬೇಕೆಂದು ಮನವಿ ಮಾಡಿದೆ. ನಂತರ ಸೋನಿಯಾ ಗಾಂಧಿ ಜೊತೆ ದೂರವಾಣಿಯಲ್ಲಿ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ನಾಯಕರು ಮಾತನಾಡಿದ್ದಾರೆ.

ಅಲ್ಲಿಂದ ಹೊರ ಬಂದಾಗ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸ್ ವಿಶೇಷ ಪಡೆ ವಶಕ್ಕೆ ಪಡೆದಿದ್ದು, ಪಾರ್ಲಿಮೆಂಟ್ ಸ್ಪೀಟ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸೌಜನ್ಯ ತಾಯಿ ಕುಸುಮಾವತಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ತಮ್ಮಣ್ಣ ಶೆಟ್ಟಿ ಸಹಿತ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಗಾಗಿ ತಂಡ ಪ್ರಯತ್ನ ನಡೆಸುತ್ತಿದೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X