ಮೈಸೂರು ಕಾಗದ ಕಾರ್ಖಾನೆ ಆರಂಭಕ್ಕೆ ಸಕಾರಾತ್ಮಕ ಚಿಂತನೆ: ಸಚಿವ ಎಂ ಬಿ ಪಾಟೀಲ್

Date:

ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆಯ ಪುನರಾರಂಭಕ್ಕೆ ಸರ್ಕಾರವು ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯ ಎಸ್ ರುದ್ರೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, “ಮೈಸೂರು ಕಾಗದ ಕಾರ್ಖಾನೆಯು ತೀವ್ರ ತರಹದ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದ ಕಾರಣ ಎಲ್ಲಾ ಉತ್ಪಾದನಾ ಘಟಕಗಳನ್ನು 21-11-2015 ರಿಂದ ಸ್ಥಗಿತಗೊಳಿಸಿದ್ದು, ಜೂನ್ 2023 ಅಂತ್ಯಕ್ಕೆ ಒಟ್ಟು ಸಂಚಿತ ನಷ್ಟ 1,482 ಕೋಟಿ ರೂ. ಆಗಿದೆ” ಎಂದು ತಿಳಿಸಿದರು.

“ಸರ್ಕಾರವು ಕಾರ್ಖಾನೆಯ ಪುನರುಜ್ಜೀವನ ಸಾಧ್ಯವಿಲ್ಲವೆಂದು ತೀರ್ಮಾನಿಸಿ ಕಾರ್ಖಾನೆಯ ಕಾರ್ಯಚಟುವಟಿಕೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದಲ್ಲಿ ನೀಡಬೇಕೆಂದು ತೀರ್ಮಾನ ಕೈಗೊಂಡು, ಈ ಪ್ರಕ್ರಿಯೆಗಳಿಗೆ ಮೆ॥ ಐಡೆಕ್‌ನ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಆರ್‌ಎಫ್ ಕ್ಯೂ ಅನ್ನು ಏಪ್ರಿಲ್ 2017,ಆಗಸ್ಟ್ 2018 ಹಾಗೂ ಮಾರ್ಚ್ 2019 ರಲ್ಲಿ ಪ್ರಕಟಿಸಲಾಗಿತ್ತು. ಆರ್‌ಎಫ್ ಕ್ಯೂಗೆ ಯಾವುದೇ ಅರ್ಜಿ ಸ್ವೀಕೃತವಾಗಿರುವುದಿಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರ್‌ಎಫ್‌ಕ್ಯೂ ಅನ್ನು ಕಂಪನಿಯು ಮೊದಲೇ ಅಪ್‌ಲೋಡ್ ಮಾಡಲಾಗಿದ್ದು ಆರ್‌ಎಫ್‌ಕ್ಯೂಗಾಗಿ ಪ್ರಚಾರವನ್ನು ಮತ್ತು ಈಗಾಗಲೇ ವ್ಯಾಪಕ ನೀಡಲಾಗಿರುವುದರಿಂದ ಪ್ರಸ್ತಾವನೆಗಾಗಿ ವಿನಂತಿಯನ್ನು (ಆರ್‌ಎಫ್‌ಪಿ) ನೇರವಾಗಿ ದಿನಾಂಕ: 25.11.2020 ರಂದು ಅಪ್‌ಲೋಡ್ ಮಾಡಲಾಗಿದ್ದು, ಇ-ಟೆಂಡರ್ ತೆರೆದಾಗ ಯಾವುದೇ ಸ್ವೀಕೃತವಾಗಿರುವುದಿಲ್ಲ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

“ನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪೆನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸಿರುತ್ತಾರೆ. ಅದರಂತೆ, ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಮತ್ತು ಬಾಕಿ ಉಳಿದಿರುವ 1,102 ಕೋಟಿಗಳ ಹೊಣೆಗಾರಿಕೆಗಳ ಕುರಿತು ಸರ್ಕಾರವು ತೀರ್ಮಾನ ತೆಗೆದು ಕೊಳ್ಳಬೇಕಾಗಿರುತ್ತದೆ” ಎಂದರು.

“ಕಾರ್ಖಾನೆಯ ಭೂ ಪ್ರದೇಶವನ್ನು ಮೈಸೂರು ಕಾಗದ ಕಾರ್ಖಾನೆಯು ಸಂರಕ್ಷಿಸಿದ್ದು, ನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸುವುದರಿಂದ, ಅದರಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ತದನಂತರ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಸಚಿವರು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...