ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

Date:

Advertisements

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಬೆನ್ನಲ್ಲೇ, ಸರ್ಕಾರದ ನಿಲುವನ್ನು ವಿರೋಧಿಸಿ ಮತ್ತು ಬಾನು ಅವರ ಧಾರ್ಮಿಕ ಹಿನ್ನೆಲೆಯನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕೋಮುವಾದಿ ಹೇಳಿಕೆಗಳನ್ನು ಹರಡಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಆರೋಪಿಗಳನ್ನು ಜಗದೀಶ್ ಉಡುಪ ಮತ್ತು ಸುದೀಪ್ ಶೆಟ್ಟಿ ನಿಟ್ಟೆ ಎಂದು ಗುರುತಿಸಲಾಗಿದೆ.

ಕೊಲ್ಲೂರಿನ ನಿವಾಸಿ ಜಗದೀಶ್ ತಮ್ಮ ಪೋಸ್ಟ್‌ನಲ್ಲಿ, “ಇದು ತಪ್ಪು, ಇದು ಒಂದು ಧರ್ಮದ ತುಷ್ಟೀಕರಣ, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ. ಸರ್ಕಾರ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಬರೆದಿದ್ದರು. ಕೊಲ್ಲೂರು ಪೊಲೀಸರು ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisements

ಕಾರ್ಕಳ ತಾಲೂಕಿನ ನಿಟ್ಟೆಯ ಸುದೀಪ್ ಶೆಟ್ಟಿ ಎಂಬವರು, “ದಸರಾ ಹಿಂದೂಗಳ ಸಾಂಸ್ಕೃತಿಕ ಉತ್ಸವ. ಹಿಂದೂ ಸಂಪ್ರದಾಯಗಳನ್ನು ಒಪ್ಪದ ವ್ಯಕ್ತಿಯಿಂದ ದಸರಾ ಉದ್ಘಾಟಿಸಿ ಹಿಂದೂ ಭಾವನೆಗಳಿಗೆ ಸರ್ಕಾರ ಪದೇ ಪದೇ ನೋವುಂಟು ಮಾಡುತ್ತಿದೆ” ಎಂದು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿರಿ: ನಕಲಿ ಮಾಸ್ಕ್‌ ಮ್ಯಾನ್‌ ಬಳಸಿ ಸುಳ್ಳು ಸುದ್ದಿ ಹರಡಿದ ವಿಶ್ವವಾಣಿ; ಪ್ರಕರಣ ದಾಖಲಾಗುವುದೇ?

ಕಾರ್ಕಳ ಗ್ರಾಮೀಣ ಸಬ್ ಇನ್‌ಸ್ಪೆಕ್ಟರ್ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡುವಾಗ ಈ ಪೋಸ್ಟ್‌ಗಳನ್ನು ಗಮನಿಸಿದ್ದಾರೆ. ಆರೋಪಿಯ ಮೇಲೆ ಬಿಎನ್‌ಎಸ್‌ನ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಕೀಲೆ, ಬರಹಗಾರ್ತಿ ಮತ್ತು ಹೋರಾಟಗಾರ್ತಿ ಬಾನು ಮುಷ್ತಾಕ್ ಅವರ ಅನುವಾದಿತ ಕೃತಿ ‘ಹಾರ್ಟ್‌ ಲ್ಯಾಂಪ್‌’ಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿತ್ತು. ಈ ಹೆಗ್ಗಳಿಕೆಗೆ ಪಾತ್ರವಾದ ಕನ್ನಡದ ಮೊದಲ ಲೇಖಕಿ ಇವರಾಗಿದ್ದಾರೆ. ಕನ್ನಡದ ಕೃತಿಯೊಂದು ಜಾಗತಿಕ ಮನ್ನಣೆ ಪಡೆಯಲು ಕಾರಣರಾದ ಬಾನು ಮುಷ್ತಾಕ್ ಅವರನ್ನು ನಾಡಿನ ಸಾಂಸ್ಕೃತಿಕ ಉತ್ಸವದ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ನಾಡಿನ ಪ್ರಜ್ಞಾವಂತ ಜನ ಸ್ವಾಗತಿಸಿದ್ದಾರೆ. ಅಲ್ಲಲ್ಲಿ ಕೋಮುವಾದಿ ಹೇಳಿಕೆಗಳು ಹೊರಬಿದ್ದಿವೆ. ಆದರೆ ಇದು ಸರ್ಕಾರ ಆಚರಿಸುವ ಹಬ್ಬ, ನಾಡಹಬ್ಬ, ಇದು ಕೇವಲ ಹಿಂದೂಗಳ ಹಬ್ಬವಲ್ಲ. ಈ ಹಿಂದೆ ನಿಸಾರ್ ಅಹಮ್ಮದ್ ಅವರು ದಸರಾವನ್ನು ಉದ್ಘಾಟಿದ್ದರು ಎಂದು ಕೋಮುವಾದಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾಗುತ್ತಿದೆ.

ತಮಗೆ ಬಂದ ಆಹ್ವಾನಕ್ಕೆ ಬಾನು ಮುಷ್ತಾಕ್ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ತಂದೆಯವರು ಕೃಷ್ಣ ರಾಜ ಸಾಗರ ಅಣೆಕಟ್ಟೆಯಲ್ಲಿ ಸೇವೆಯಲ್ಲಿದ್ದಾಗ ನಮ್ಮ ಕುಟುಂಬದೊಂದಿಗೆ ನಾಡಹಬ್ಬ ದಸರಾ ಉತ್ಸವ ನೋಡಿದ್ದೆ” ಎಂದು ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ.

“ನಾನು ಜಯಚಾಮರಾಜೇಂದ್ರ ಒಡೆಯರ್ ಅವರ ಮೆರವಣಿಗೆಯನ್ನು ನೋಡಿದ್ದೇನೆ. ಒಂದು ದಿನ ನಾನು ದಸರಾ ಉದ್ಘಾಟಿಸುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ. ದಸರಾ ಏಕತೆಯನ್ನು ಪ್ರತಿನಿಧಿಸುತ್ತದೆ. ಅಂಚಿನಲ್ಲಿರುವ ಗುಂಪುಗಳು ಮತ್ತು ಮಹಿಳೆಯರು ದಸರಾ ಉದ್ಘಾಟಿಸಲು ಮತ್ತು ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ. ಆ ಮೂಲಕ ದಸರಾ ಅರ್ಥಪೂರ್ಣವಾಗಿದೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆ | 60 ದಿನದ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ...

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ನಕಲಿ ಮಾಸ್ಕ್‌ ಮ್ಯಾನ್‌ ಬಳಸಿ ಸುಳ್ಳು ಸುದ್ದಿ ಹರಡಿದ ವಿಶ್ವವಾಣಿ; ಪ್ರಕರಣ ದಾಖಲಾಗುವುದೇ?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯ (ಭೀಮ) ಅವರನ್ನು ಪೊಲೀಸರು ಬಂಧಿಸಿದ್ದಾರೆ....

Download Eedina App Android / iOS

X