ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ. 12ಕ್ಕೆ ಮುಂದೂಡಿಕೆ

Date:

Advertisements

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಸೆಪ್ಟೆಂಬರ್‌ 12ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು, ಗೌಪ್ಯ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಆದೇಶ ಪಡೆಯಲಾಗುವುದು ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್

Advertisements

ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು. ಇದನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಪ್ರಜ್ವಲ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ. “ನಮಗೆ ಆರೋಪ ಪಟ್ಟಿ ನೀಡಿಲ್ಲ. ಆರೋಪ ಪಟ್ಟಿ ನೀಡಬೇಕು” ಎಂದು ಹೇಳಿದ್ದಾರೆ. “ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿದ ಬಳಿಕ ನಿಮಗೆ ಆರೋಪ ಪಟ್ಟಿ ನೀಡಲಿದೆ” ಎಂದು ಪೀಠ ಹೇಳಿದೆ.

“ನಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವುದೇ ಸರಿಯಲ್ಲ. ಮೊದಲಿಗೆ ದೂರಿನಲ್ಲಿ ಅತ್ಯಾಚಾರ ಆರೋಪ ಇರಲಿಲ್ಲ. ವಿಚಾರಣಾ ಹಂತದಲ್ಲಿ ಅತ್ಯಾಚಾರ ಆರೋಪ ಮಾಡಲಾಗಿದೆ” ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರು ವಾದಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X