ಅಂಬೇಡ್ಕರ್ ಶತಮಾನ ಸಂಭ್ರಮ ತಡೆಯಲು ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ ಆರೋಪ

Date:

Advertisements

ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡೇ ರಾಜ್ಯ ಸರ್ಕಾರಕ್ಕೆ ಸೂಚಿಸುವ ಮೂಲಕ ಅಂಬೇಡ್ಕರ್ ಗೌರವಾರ್ಥದ ಸಮಾರಂಭವನ್ನು ತಡೆದಿದೆ ಎಂದು ದೂರಿದರು.

“ರಾಜ್ಯ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ ಖರ್ಗೆ ಅವರು ದಲಿತ ಸಮುದಾಯದ ಕ್ಷಮೆ ಕೇಳಬೇಕು. ಯಾವುದೋ ಒತ್ತಡದಿಂದ ಈ ಪ್ರಮಾದವಾಗಿದೆ. ಇದಕ್ಕಾಗಿ ದೇಶದ ಕ್ಷಮೆ ಕೇಳುತ್ತೇವೆ. ಮುಂದೆ ಯಾವುದೇ ರೀತಿ ಚ್ಯುತಿ ಬರದಂತೆ ಅಂಬೇಡ್ಕರ್‌ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಗಳನ್ನು ನಡೆಸುವುದಾಗಿ” ಹೇಳಲಿ ಎಂದು ಒತ್ತಾಯಿಸಿದರು.

Advertisements

“ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನಕ್ಕೆ, ಅವರು ಮಾಡಿದಂತಹ ಅಪ್ರತಿಮ ಕಾರ್ಯಗಳಿಗೆ, ತ್ಯಾಗ ಬಲಿದಾನಕ್ಕೆ ಗೌರವ ಕೊಟ್ಟು ಖರ್ಗೆ ಅವರು ದೇಶದ ಕ್ಷಮೆಯಾಚಿಸಬೇಕು. ಇನ್ನು ಮುಂದೆಯಾದರೂ ಕಾಂಗ್ರೆಸ್‌ ಆಡಳಿತ ಇರುವ ಎಲ್ಲಾ ಕಡೆ ಅಂಬೇಡ್ಕರ್‌ ಅವರ ಕಾರ್ಯಕ್ರಮಗಳನ್ನು ಗೌರವದಿಂದ ಆಚರಿಸುವಂತೆ ಸರ್ಕಾರಗಳಿಗೆ ಸೂಚನೆ ನೀಡಬೇಕು” ಎಂದರು.

ಕಾಂಗ್ರೆಸ್‌ನಲ್ಲಿ ಖರ್ಗೆ ಮಾತು ನಡೆಯಲ್ಲ

“ನಕಲಿ ಗಾಂಧಿಗಳಿರುವ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಎಐಸಿಸಿ ಅಧ್ಯಕ್ಷರೇ ಆಗಿದ್ದರೂ ಅವರ ಮಾತು ಏನೂ ನಡೆಯುವುದಿಲ್ಲ. ರಾಜ್ಯ ಸರ್ಕಾರದಲ್ಲೂ ಅಷ್ಟೇ. ಮೊದಲು ರಾಜ್ಯದಲ್ಲಿ ಸರ್ಕಾರದಿಂದ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಸಮುದಾಯದ ಕ್ಷಮೆಯಾಚಿಸಲಿ. ಅಂಬೇಡ್ಕರ್‌ ಬೌದ್ಧ ಧರ್ಮ ಸ್ವೀಕಾರ ಮಾಡಿದಂತಹ ದೀಕ್ಷಾ ಭೂಮಿಯನ್ನು ಅಭಿವೃದ್ಧಿಪಡಿಸಿರುವುದೇ NDA ಸರ್ಕಾರ. ನಕಲಿ ಗಾಂಧಿಗಳಿಂದ ಕೂಡಿದ್ದ ಕಾಂಗ್ರೆಸ್‌ ಸರ್ಕಾರವಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಇತಿಹಾಸ ಸರಿ ಗೊತ್ತಿಲ್ಲ” ಎಂದು ಟೀಕಿಸಿದರು.

“ಭಾರತರತ್ನದಂತಹ ಪುರಸ್ಕಾರವನ್ನು ಸ್ವಯಂ ಆಗಿ ತಮಗೆ ತಾವೇ ಘೋಷಿಸಿಕೊಂಡ ಇಂದಿರಾಗಾಂಧಿ, ನೆಹರು ಅವರು ಕೊನೆಗೂ ಅಂಬೇಡ್ಕರ್‌ ಅವರಿಗೆ ನೀಡಲಿಲ್ಲ. ಕನಿಷ್ಠಪಕ್ಷ ದೆಹಲಿಯಲ್ಲಿ ಅಂಬೇಡ್ಕರ್‌ ಸ್ಮಾರಕಕ್ಕೆ ಜಾಗ ಸಹ ಕೊಡದಾದರು. ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗುವುದಿಲ್ಲವೇ” ಎಂದು ಪ್ರಶ್ನಿಸಿದರು.

ಮಹಾತ್ಮಗಾಂಧಿ ಶತಮಾನ ಸಂಭ್ರಮ ಖುಷಿ

“ರಾಜ್ಯ ಸರ್ಕಾರ ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸಿತು. ಅದೊಂದು ರೀತಿ ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಪಕ್ಷದ ಸಮಾವೇಶದಂತಿತ್ತು. ಏನೇ ಆದರೂ ಬೆಳಗಾವಿಗೆ ಮಹಾತ್ಮಗಾಂಧಿ ಅವರು ಬಂದಿದ್ದನ್ನು ಸ್ಮರಿಸಿತು ಎಂಬುದೇ ಒಂದು ಖುಷಿಯ ವಿಚಾರ. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಅಂಬೇಡ್ಕರ್‌ ಬಂದು ಹೋದ ನೂರು ವರ್ಷದ ನೆನಪನ್ನು ನಕಲಿ ಗಾಂಧಿವಾದಿಗಳ ಮಾತು ಕಟ್ಟಿಕೊಂಡು ಕೈ ಬಿಟ್ಟಿತು ಎಂಬುದು ತೀವ್ರ ನೋವಿನ ಸಂಗತಿ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X