ರಾಜ್ಯದ ಜನರಿಗೆ ಮತ್ತೊಂದು ಬಿಸಿ;ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ‌ ನಿರ್ಧಾರ

Date:

Advertisements

ಇತ್ತೀಚೆಗೆ ಬೆಲೆ ಏರಿಕೆ ವಿಚಾರ ಭಾಗಿ ಚರ್ಚೆ ಆಕ್ರೋಶಕ್ಕೆ‌ ಕಾರಣವಾಗಿದೆ. ಮೆಟ್ರೋ, ಹಾಲು, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ‌ ಏರಿಕೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳ ‌ವಿರುದ್ಧ ಭಾರೀ‌ ಆಕ್ರೋಶ ವ್ಯಕ್ತವಾಗಿತ್ತಿದೆ. ಈ ನಡುವೆ, ಈಗ ಖಾಸಗಿ ಬಸ್‌ಗಳ ಟಿಕೆಟ್ ದರವನ್ನೂ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ.

ಪೆಟ್ರೋಲ್, ಡೀಸೆಲ್‌ ದರ ಏರಿಕೆ ಹಾಗೂ ಟೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ‌ ಟಿಕೆಟ್ ದರ ಹೆಚ್ಚಸಲು ಖಾಸಗಿ ಬಸ್‌ಗಳ‌ ಮಾಲೀಕರು ಮುಂದಾಗಿದ್ದಾರೆ.

“ಡೀಸೆಲ್​ ದರ ಸುಮಾರು ಐದು ರೂಪಾಯಿ ಏರಿಕೆಯಾಗಿದೆ. ಟೋಲ್ ದರವೂ ಹೆಚ್ಚಾಗಿದೆ. ಬಸ್‌ಗಳನ್ನು ಓಡಿಸುವುದು ಹೊರೆಯಾಗುತ್ತಿದೆ. ಹೀಗಾಗಿ, ದರ ಏರಿಸದಿದ್ದರೆ ಖಾಸಗಿ ಬಸ್ ಉದ್ಯಮವೇ ಸ್ಥಗಿತಗೊಳ್ಳುತ್ತದೆ” ಎಂದು‌ ಖಾಸಗಿ‌ ಬಸ್ ಮಾಲೀಕರ ಸಂಘ ಹೇಳಿದೆ.

Advertisements

“ಟೋಲ್, ಡೀಸೆಲ್, ಸಿಬ್ಬಂದಿ‌ವೇತನ‌ ಸೇರಿದಂತೆ‌ ಪ್ರತಿ ಬಸ್​ ನಿರ್ವಹಣೆಗೆ ದಿನಕ್ಕೆ 18 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚಾಗುತ್ತದೆ. ಬೆಲೆ ಏರಿಕೆಯು ಈ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗಾಗಿ, ದರ ಏರಿಕೆ ಮಾಡುವುದು‌ ಅನಿವಾರ್ಯವಾಗಿದೆ. ಪ್ರತಿ ಟಿಕೆಟ್ ಗರಿಷ್ಠ‌ 3 ರೂ. ಏರಿಕೆ ಮಾಡಲು ಚಿಂತನೆ‌ ನಡೆದಿದೆ. ಮುಂದಿನ ವಾರ ನಿರ್ಧರಿಸಿ, ನಿಗದಿ ಮಾಡಲಾಗುತ್ತದೆ” ಎಂದು ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯ್ಕ್ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ ಒಟ್ಟು 8,000 ಖಾಸಗಿ ಬಸ್‌ಗಳು‌ ಪ್ರಯಾಣ ಸೇವೆ ಒದಗಿಸುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X