ಪಿಎಸ್ಐ ಮರುಪರೀಕ್ಷೆ: ಕೀ ಉತ್ತರ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Date:

Advertisements

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ.23ರಂದು ನಡೆಸಿದ ಪಿಎಸ್‌ಐ ಮರು ಪರೀಕ್ಷೆಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿದೆ. ಈ ಸದರಿ ಕೀ ಉತ್ತರಗಳಿಗೆ ಸಂಬಂಧಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಮುಂದಿನ ಫೆಬ್ರವರಿ 5ರ ಸಂಜೆ ಐದು ಗಂಟೆಯೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ಬುಕ್‌ಲೆಟ್‌ ಪ್ರಕಾರ ಕೀ ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯ. ಅಲ್ಲದೇ ಪ್ರತಿ ಪ್ರಶ್ನೆಗೆ ನಿಗದಿತ ಶುಲ್ಕ ಪಾವತಿಸಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

Advertisements

ತಾತ್ಕಾಲಿಕ ಸರಿಯುತ್ತರಗಳಿಗೆ ಆಕ್ಷೇಪಣೆ ಸಲ್ಲಿಸುವುದು ಹೇಗೆ?
ಕೆಇಎ ವೆಬ್‌ಸೈಟ್‌ನಲ್ಲಿ ಜ.30 ರಂದು ವೆಬ್‌ಲಿಂಕ್‌ ಒಂದನ್ನು ಆಕ್ಷೇಪಣೆ ಸಲ್ಲಿಸಲು ನೀಡಲಾಗುತ್ತದೆ. ಸದರಿ ಲಿಂಕ್‌ ಕ್ಲಿಕ್ ಮಾಡುವ ಮೂಲಕ ಅಭ್ಯರ್ಥಿಗಳು ತಮ್ಮ ರಿಜಿಸ್ಟ್ರೇಷನ್‌ ನಂಬರ್, ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್ ಆಗಬೇಕು. ನಂತರ ಕೇಳಲಾಗುವ ಮಾಹಿತಿಗಳನ್ನು, ಪೂರಕ ದಾಖಲೆಗಳನ್ನು ನೀಡಿ. ಶುಲ್ಕ ಪಾವತಿಸಿ. ಆಕ್ಷೇಪಣೆ ಸಲ್ಲಿಸಬಹುದು.

ಪ್ರಾಧಿಕಾರವು ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಒಂದು ವಾರದೊಳಗೆ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಿದೆ. ನಂತರ ಮುಂದಿನ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ. ಪತ್ರ, ಇ-ಮೇಲ್ ಮೂಲಕ ಕಳುಹಿಸುವಂತಹ ಆಕ್ಷೇಪಗಳನ್ನು ಪುರಸ್ಕರಿಸುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್‌ ಸಬ್‌‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.

ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ತಾತ್ಕಾಲಿಕ ಸರಿಯುತ್ತರಗಳನ್ನು ಚೆಕ್‌ ಮಾಡಲು ಕೆಳಗಿನ ಡೈರೆಕ್ಟ್‌ ಲಿಂಕ್‌ ಅನ್ನು ಕ್ಲಿಕ್ ಮಾಡಬಹುದು.

https://cetonline.karnataka.gov.in/kea/

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X