ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ

Date:

Advertisements

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

“ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಇದನ್ನು ಓದಿದ್ದೀರಾ? ನವೆಂಬರ್ 5 ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Advertisements

ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ. ನಾಳೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಉಲ್ಲೇಖಿಸಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X