ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು, ನೆರವಾಗುವುದೇ ಸರ್ಕಾರ?

Date:

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು.

ಮುಂಗಾರು ಆರಂಭದಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರಿಗೆ ಇದೀಗ ಮಳೆ ಕೈಕೊಟ್ಟಿರುವುದು ಸಂಕಷ್ಟ ತಂದೊಡ್ಡಿದೆ. 2026ರ ಮುಂಗಾರು ಹಂಗಾಮಿನಲ್ಲಿ ತಾಲೂಕಿನ ಮಳೆಯಾಶ್ರಿತ ಬೆಳೆಗಳ ಒಟ್ಟು ಬಿತ್ತನೆ ಪ್ರಮಾಣ ಶೇ.88.7ರಷ್ಟಿದ್ದು, 51,894 ಹೆಕ್ಟೇ‌ರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ. ಆದರೆ ನಂತರ ಮಳೆ ಕೊರತೆಯಾಗಿದ್ದರಿಂದ ಕಾಯಿ ಬಿಡುವ ಹಂತದಲ್ಲಿದ್ದ ಹೆಸರು ಸೇರಿದಂತೆ ಹಲವು ಬೆಳೆಗಳು ಒಣಗಲಾರಂಭಿಸಿದ್ದು, ಶೇ.50ಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ ಎಂದು ರೈತರು ಹೇಳುತ್ತಿದ್ದಾರೆ.

- Advertisement -

ತಾಲೂಕಿನಲ್ಲಿ ಹೆಸರು 24,371 ಹೆಕ್ಟೇ‌ರ್, ಮೆಕ್ಕೆಜೋಳ(ಗೋವಿನಜೋಳ) 8,075 ಹೆಕ್ಟೇ‌ರ್, ತೊಗರಿ 1,932 ಹೆಕ್ಟೇ‌ರ್, ಸಜ್ಜೆ 1,773 ಹೆಕ್ಟೇ‌ರ್, ಸೂರ್ಯಕಾಂತಿ 590 ಹೆಕ್ಟೇ‌ರ್, ಹತ್ತಿ 540 ಹೆಕ್ಟೇರ್ ಹಾಗೂ ಶೇಂಗಾ 115 ಹೆಕ್ಟೇ‌ರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಮೆಕ್ಕೆಜೋಳದ ಬಿತ್ತನೆ ಗುರಿ 21,210 ಹೆಕ್ಟೇ‌ರ್ ಆಗಿದ್ದರೂ, ಮಳೆ ಕೊರತೆಯಿಂದ ಕೇವಲ 8,075 ಹೆಕ್ಟೇ‌ರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಸಾಧ್ಯವಾಗಿದೆ. ಬಿತ್ತನೆಯಾದ ಬೆಳೆಗಳಿಗೂ ನಂತರ ಸಮರ್ಪಕ ಮಳೆಯಾಗದೆ ರೈತರ ನಿರೀಕ್ಷೆ ಹುಸಿಯಾಗಿದೆ.

ರಾಮದುರ್ಗದಂತೆ ಸವದತ್ತಿ ತಾಲೂಕಿನಲ್ಲಿಯೂ ಮುಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ರೈತರು ಸೋಯಾಬಿನ್, ಹತ್ತಿ, ಹೆಸರು, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದರೂ, ನಂತರ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯ 15 ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಲಿ

ಈ ಕುರಿತು ಈ ದಿನ.ಕಾಮ್ ಜತೆ ಭಾರತೀಯ ಕೃಷಿಕ ಸಮಾಜದ ಮುಖಂಡ ಸಿದ್ದಗೌಡ ಮೋದಗಿ ಮಾತನಾಡಿ, “ಸರ್ಕಾರ ಮುಖ್ಯಮಂತ್ರಿಗಳು ಹಾಗೂ ಜನಪ್ರತಿನಿಧಿಗಳ ಹಿಡಿತದಲ್ಲಿ ಇಲ್ಲ. ಸರ್ಕಾರದಲ್ಲಿ ಹಣವೂ ಇಲ್ಲ. ಶಾಸಕರು ಸಚಿವ ಸ್ಥಾನದ ಕಚ್ಚಾಟದಲ್ಲಿದ್ದಾರೆ. ಇದರಿಂದ ಸರಿಯಾಗಿ ಬರ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದರು.

“ಬೆಳಗಾವಿ ಜಿಲ್ಲೆಯ ಒಟ್ಟು 15 ತಾಲೂಕುಗಳನ್ನೂ ಬರಪೀಡಿತವೆಂದು ಘೋಷಣೆ ಮಾಡಬೇಕು. ಉತ್ತರ ಕರ್ನಾಟಕದ ಬರಪೀಡಿತ ತಾಲೂಕುಗಳನ್ನೂ ಗುರುತಿಸಿ ರೈತರಿಗೆ ಅಗತ್ಯ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಈ ಕುರಿತು ರಾಮದುರ್ಗ ತಾಲೂಕಿನ ರೈತ ಸಂಘಟನೆಯ ಮುಖಂಡ ಮಲ್ಲಿಕಾರ್ಜುನ ರಾಮದುರ್ಗ ಈ ದಿನ.ಕಾಮ್ ಜತೆ ಮಾತನಾಡಿ, “ರಾಮದುರ್ಗ ತಾಲೂಕನ್ನು ಬರಪೀಡಿತವೆಂದು ಘೋಷಣೆ ಮಾಡಬೇಕಾಗಿ ರಾಜ್ಯ ಸರ್ಕಾರ, ಶಾಸಕರು ಹಾಗೂ ವಿರೋಧ ಪಕ್ಷಗಳಿಗೂ ಮನವಿ ಮಾಡಿದ್ದೆವು. ಆದರೆ ಸರ್ಕಾರ ಇನ್ನೂ ತಾಲೂಕನ್ನು ಬರಪೀಡಿತವೆಂದು ಘೋಷಣೆ ಮಾಡಿಲ್ಲ” ಎಂದರು.

“ರೈತರು ಬೆಳೆದ ಕಬ್ಬು, ಮೆಕ್ಕೆಜೋಳ, ಹೆಸರು, ತೊಗರಿ ಸೇರಿದಂತೆ ಹಲವು ಬೆಳೆಗಳು ಸರಿಯಾಗಿ ಬಂದಿಲ್ಲ. ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ” ಎಂದು ಹೇಳಿದರು.

ರಾಮದುರ್ಗ ತಾಲೂಕಿನ ಕೃಷಿ ಅಧಿಕಾರಿಗಳು ಈ ದಿನ.ಕಾಮ್ ಜತೆ ಮಾತನಾಡಿ, “ರಾಮದುರ್ಗ ತಾಲೂಕು ಕೂಡ ಬರಪೀಡಿತವೆಂದು ಘೋಷಣೆಯಾಗಬೇಕಿತ್ತು. ಈ ಕುರಿತು ಮೇಲಧಿಕಾರಿಗಳ ಜತೆ ಚರ್ಚಿಸಲಾಗುತ್ತಿದೆ” ಎಂದು ತಿಳಿಸಿದರು.

“ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ” ಎಂದು ಕೃಷಿ ಅಧಿಕಾರಿಗಳು ಹೇಳಿದರು.

ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ರಾಮದುರ್ಗ ತಾಲೂಕು ಇನ್ನೂ ಬರಪೀಡಿತ ಪಟ್ಟಿಗೆ ಸೇರದಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಸವದತ್ತಿಯಲ್ಲೂ ಮಳೆ ಕೊರತೆಯಿಂದ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲವೆಂಬ ಕಳವಳ ವ್ಯಕ್ತವಾಗಿದೆ.

ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದರಿಂದ ರಾಮದುರ್ಗ ಹಾಗೂ ಸವದತ್ತಿ ತಾಲೂಕಿನ ರೈತರು ಸರ್ಕಾರದ ಬರ ಘೋಷಣೆಯತ್ತ ಎದುರು ನೋಡುತ್ತಿದ್ದಾರೆ. ಈಗಾಗಲೇ ಶೇ.50ಕ್ಕೂ ಹೆಚ್ಚು ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವಿಳಂಬ ಮಾಡದೆ ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿದ್ದೀರಾ? UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಈ ಕುರಿತು ರಾಮದುರ್ಗ ಕ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರು ಮುಂದಿನ ವಾರ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. 10 ದಿನಗಳಲ್ಲಿ ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಾಸಕರ ಈ ಭರವಸೆ ರೈತರಲ್ಲಿ ನಿರೀಕ್ಷೆ ಮೂಡಿಸಿದ್ದು, ಅಧಿಕಾರಿಗಳ ಸಭೆ ಹಾಗೂ ಮುಂದಿನ ಕ್ರಮಗಳು ಎಷ್ಟರ ಮಟ್ಟಿಗೆ ರೈತರ ಸಂಕಷ್ಟಕ್ಕೆ ಪರಿಹಾರ ನೀಡಲಿವೆ ಎಂಬುದನ್ನು ಕಾದು ನೋಡಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಕಾರವಾರ | ಕಡವಾಡದಲ್ಲಿ ನಿರಂತರ ವಿದ್ಯುತ್ ಕಡಿತ – ಹೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...