ಖಾಸಗಿ ವಿವಿಗಳಿಂದ ನಿಯಮಬಾಹಿರವಾಗಿ ಸರ್ಕಾರದ ಅನುದಾನ ಸ್ವೀಕಾರ, ತನಿಖೆಗೆ ರಮೇಶ್‌ ಬಾಬು ಆಗ್ರಹ

Date:

Advertisements

ಖಾಸಗಿ ವಿಶ್ವವಿದ್ಯಾಲಯಗಳು ಸರ್ಕಾರದ ಅನುದಾನವನ್ನು ನಿಯಮಬಾಹಿರವಾಗಿ ಪಡೆದುಕೊಳ್ಳುತ್ತಿರುವ ಕುರಿತು ತ್ವರಿತ ಪೊಲೀಸ್ ತನಿಖೆ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, “ನಮ್ಮ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಬಹಳ ಗಂಭೀರ ಮತ್ತು ಆತಂಕಕಾರಿ ವಿಷಯವೊಂದನ್ನು ನಿಮ್ಮ ಗಮನಕ್ಕೆ ತರಲು ಈ ಪತ್ರವನ್ನು ಬರೆಯುತ್ತಿದ್ದೇನೆ. ಕರ್ನಾಟಕದ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ಸರ್ಕಾರದ ಅನುದಾನವನ್ನು ಅಕ್ರಮವಾಗಿ, ನೈತಿಕತೆಯಿಲ್ಲದ ರೀತಿಯಲ್ಲಿ ಪಡೆದುಕೊಳ್ಳುತ್ತಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಮಗೆ ಗೊತ್ತಿರುವಂತೆ, ಖಾಸಗಿ ವಿಶ್ವವಿದ್ಯಾಲಯಗಳು ತಮ್ಮ ಸ್ವಂತ ಆರ್ಥಿಕ ಸಂಪನ್ಮೂಲಗಳಿಂದ ಕಾರ್ಯ ನಿರ್ವಹಿಸಬೇಕಾಗಿರುತ್ತದೆ. ಆದರೆ, ಕೆಲವು ಸಂಸ್ಥೆಗಳು ಸುಳ್ಳು ದಾಖಲೆಗಳು, ರಾಜಕೀಯ ಅಥವಾ ಅಧಿಕಾರಿಗಳ ಪ್ರಭಾವ ಬಳಸಿ, ಸರ್ಕಾರದ ಅಥವಾ ಸಾರ್ವಜನಿಕ ಸಂಸ್ಥೆಗಳಿಗಾಗಿ ಮೀಸಲಿಟ್ಟ ಅನುದಾನಗಳನ್ನು ಕಬಳಿಸುತ್ತಿರುವುದಾಗಿ ತಿಳಿದುಬಂದಿದೆ” ಎಂದಿದ್ದಾರೆ.

“ಇದು ಕೇವಲ ನಿಯಮ ಉಲ್ಲಂಘನೆ ಮಾತ್ರವಲ್ಲದೇ ಸಾರ್ವಜನಿಕ ಹಣದ ದುರುಪಯೋಗಕ್ಕೂ ಕಾರಣವಾಗುತ್ತಿದೆ. ಈ ರೀತಿ ನಡೆಯುವುದರಿಂದ ನಿಷ್ಠಾವಂತ ಮತ್ತು ಸಹಾಯಧನದ ಆಧಾರಿತ ಸಂಸ್ಥೆಗಳು ತಮ್ಮ ಹಕ್ಕಿನ ಅನುದಾನದಿಂದ ವಂಚಿತವಾಗುತ್ತಿವೆ. ಈ ಕಾರಣದಿಂದ ಶಿಕ್ಷಣ ಕ್ಷೇತ್ರದಲ್ಲಿ ಅಕ್ರಮ ಮಾರ್ಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರದ ನೈತಿಕ ಬದ್ಧತೆ ಮತ್ತು ಜನಪರ ಆಡಳಿತದ ಕಾರಣಕ್ಕಾಗಿ ಕೆಳಗಿನ ಕ್ರಮಗಳನ್ನು ಕೈಗೊಳ್ಳಿ” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisements

1 – ಇಂತಹ ಅನುದಾನ ದುರ್ಬಳಕೆ ಮಾಡಿರುವ ಖಾಸಗಿ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಮಟ್ಟದ ಪೊಲೀಸ್ ತನಿಖೆ ನಡೆಸಬೇಕು.

2 – ಉನ್ನತ ಶಿಕ್ಷಣ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ಕಳೆದ 5 ರಿಂದ 10 ವರ್ಷಗಳ ಅವಧಿಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳಿಗೆ ನೀಡಲಾದ ಎಲ್ಲಾ ಅನುದಾನಗಳನ್ನು ಪುನರ್ ಪರಿಶೀಲನೆ ಮಾಡಬೇಕು.

3 – ತಪ್ಪಿತಸ್ಥ ಸಂಸ್ಥೆಗಳಿಗೆ ಆರ್ಥಿಕ ದಂಡ ವಿಧಿಸಿ, ಅನುದಾನ ಮರುಪಾವತಿಗೆ ಆದೇಶ ಮಾಡಬೇಕು ಹಾಗೂ ನ್ಯಾಯಬಾಹಿರ ಚಟುವಟಿಕೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಕೇಸು ದಾಖಲಿಸಬೇಕು.

4 – ಇಂತಹ ಕೃತ್ಯಗಳು ಮರುಕಳಿಸದಂತೆ, ಅನುದಾನಗಳ ವಿತರಣೆಯಲ್ಲಿ ಪಾರದರ್ಶಕ ವ್ಯವಸ್ಥೆ ರೂಪಿಸಬೇಕು.

5 – ಈ ವಿಷಯದಲ್ಲಿ ಸಾರ್ವಜನಿಕರು, ಆಸಕ್ತಿ ಇರುವವರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರು ಭಯವಿಲ್ಲದೆ ದೂರು ನೀಡಲು ಅನುಕೂಲವಾಗುವಂತೆ ಒಂದು ದೂರು ಸಮಿತಿ ಸ್ಥಾಪಿಸಬೇಕು.

    “ಜನಸಾಮಾನ್ಯರ ಮತ್ತು ಪ್ರಗತಿಪರರ ಚಿಂತನೆಗಳಿಗೆ ಅನುಗುಣವಾಗಿ ಕರ್ನಾಟಕದ ಶಿಕ್ಷಣ ಕ್ಷೇತ್ರವು ನೈತಿಕತೆ, ಸಮಾನತೆ ಮತ್ತು ನಿಷ್ಠೆಯ ಮೇರೆಗೆ ಮೌಲ್ಯಗಳ ಮೂಲಕ ನಡೆಯಬೇಕಾದ ಅಗತ್ಯವಿದೆ. ನಿಮ್ಮ ನಾಯಕತ್ವದಲ್ಲಿ ಇಂತಹ ಅಕ್ರಮಗಳನ್ನು ತಡೆಯುವ ಮತ್ತು ನಿಯಮ ಉಲ್ಲಂಘನೆಗಳಿಗೆ ತೀವ್ರವಾದ ಶಿಕ್ಷೆ ನೀಡುವ ವಿಶ್ವಾಸ ನಮ್ಮಲ್ಲಿದೆ. ಈ ಬಗ್ಗೆ ತಾವು ತಕ್ಷಣ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕ ಹಿತವನ್ನು ಕಾಪಾಡುವಂತೆ ಕೋರುತ್ತೇನೆ ಮತ್ತು ಸೂಕ್ತಕ್ರಮವನ್ನು ಸರ್ಕಾರದಿಂದ ನಿರೀಕ್ಷಿಸುತ್ತಿದ್ದೇನೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ರಮೇಶ್‌ ಬಾಬು ತಿಳಿಸಿದ್ದಾರೆ

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

    ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

    ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

    ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

    ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

    ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

    ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

    ""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

    Download Eedina App Android / iOS

    X