ರಾಮೇಶ್ವರಂ ಕೆಫೆ | ತಮಿಳರ ಬಗ್ಗೆ ಅವಹೇಳನಕಾರಿ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು

Date:

Advertisements

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ಷಮಾಪಣೆ ಪರಿಗಣಿಸಿ ಮದ್ರಾಸ್‌ ಹೈಕೋರ್ಟ್‌ ಪ್ರಕ್ರಿಯೆ ರದ್ದುಪಡಿಸಿತ್ತು. ಇದರ ಆಧಾರದಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

“ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್‌ ಹಾಕುತ್ತಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು ಇದು ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Advertisements

ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್

ಇದಾದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಶೋಭಾ “ನನ್ನ ತಮಿಳು ಸಹೋದರರು ಮತ್ತು ಸಹೋದರಿಯರೇ, ನಾನು ಈ ಪ್ರಕರಣದ ಬೆಳಕು ಚೆಲ್ಲುವ ಉದ್ದೇಶದಿಂದ ಹೇಳಿಕೆ ನೀಡಿರುವುದೇ ಹೊರತು ಯಾರ ಮೇಲೆಯೂ ಆರೋಪ ಹೊರಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೂ ನನ್ನ ಹೇಳಿಕೆ ಕೆಲವರಿಗೆ ನೋವು ತಂದಿದೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದರು.

ಆದರೆ ತಮಿಳುನಾಡಿನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಪಡಿಸುವಂತೆ ಕೋರಿ ಕೇಂದ್ರ ಸಚಿವೆ ಕೋರ್ಟ್ ಮೆಟ್ಟಿಲೇರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X