ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ

Date:

ಕನ್ನಡದ ಹಿರಿಯ ಕಥೆಗಾರ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಲಭಿಸಿದೆ.

- Advertisement -

​ಸೋಮವಾರ ನವದೆಹಲಿಯಲ್ಲಿ ಅಕಾದೆಮಿಯು ಕನ್ನಡವೂ ಸೇರಿದಂತೆ ಒಟ್ಟು 24 ಭಾರತೀಯ ಭಾಷೆಗಳ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ, ತಾಮ್ರದ ಫಲಕ ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ. ಇದೇ ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾದೆಮಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕನ್ನಡ ವಿಭಾಗದ ಕೃತಿ ಆಯ್ಕೆಗಾಗಿ ರಚಿಸಲಾಗಿದ್ದ ತ್ರಿಸದಸ್ಯ ತೀರ್ಪುಗಾರರ ಮಂಡಳಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಕಾರ್ಯನಿರ್ವಹಿಸಿದ್ದರು. ಸುದೀರ್ಘ ಪರಿಶೀಲನೆಯ ಬಳಿಕ ಮಂಡಳಿಯು ನುಗಡೋಣಿ ಅವರ ಕೃತಿಯನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

‘ದಡ ಸೇರಿಸು ತಂದೆ’ ಅಮರೇಶ ನುಗಡೋಣಿ ಅವರ ಆರನೇ ಕಥಾಸಂಕಲನ. ಪಲ್ಲವ ಪ್ರಕಾಶನ 2020ರಲ್ಲಿ ಹೊರತಂದಿರುವ ಈ ಕೃತಿಯಲ್ಲಿ ಒಟ್ಟು ಎಂಟು ಕಥೆಗಳಿವೆ. ಮರ್ಯಾದಾ ಹತ್ಯೆ, ಗುಂಪು ಹಲ್ಲೆ (ಮಾಬ್ ಲಿಂಚಿಂಗ್) ಸೇರಿದಂತೆ ಸಮಕಾಲೀನ ಗ್ರಾಮೀಣ ಭಾರತದ ತಲ್ಲಣಗಳನ್ನು, ಸಮಾಜದಲ್ಲಿ ದಿನೇದಿನೇ ಕುಸಿಯುತ್ತಿರುವ ಮಾನವೀಯ ಮೌಲ್ಯಗಳನ್ನು ಈ ಕಥೆಗಳು ಅತ್ಯಂತ ಮಾರ್ಮಿಕವಾಗಿ ಹಾಗೂ ನೈಜವಾಗಿ ಕಟ್ಟಿಕೊಡುತ್ತವೆ.

​ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನುಗಡೋಣಿಯವರಾದ ಲೇಖಕರು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರ ‘ಸವಾರಿ’ ಕಥೆಯನ್ನಾಧರಿಸಿ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ ‘ಕನಸೆಂಬ ಕುದುರೆಯನೇರಿ’ ಚಲನಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿತ್ತು.

​ಇತರೆ ಭಾಷೆಗಳ ಪುರಸ್ಕೃತರು:
ಕನ್ನಡದ ಜೊತೆಗೆ ಇಂಗ್ಲಿಷ್ (ಕ್ರಿಮ್ಸನ್ ಸ್ಪ್ರಿಂಗ್ – ಕಾದಂಬರಿ), ಮಲಯಾಳಂ (ಮಾಯಾಮನುಷ್ಯರ್ – ಕಾದಂಬರಿ), ಪಂಜಾಬಿ (ಸೇಫ್ಟಿ ಕಿಟ್ – ಕಥಾಸಂಕಲನ), ಬಂಗಾಳಿ (ಶ್ರೇಷ್ಠ ಕಬಿತಾ – ಕವಿತೆ), ಸಂಸ್ಕೃತ (ಪ್ರಸ್ಥಾನಚತುಷ್ಟಯೇ ಬ್ರಹ್ಮಘೋಷಃ), ತೆಲುಗು (ಅನಿಮೇಷ) ಹಾಗೂ ಉರ್ದು (ಸಫರ್ ಜಾರಿ ಹೈ) ಸೇರಿದಂತೆ ಒಟ್ಟು 24 ಭಾಷೆಗಳ ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಒಲಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...