ಎಸ್ಸಿ ಜನಗಣತಿ | ಶೇ.50ಕ್ಕಿಂತ ಹೆಚ್ಚು ಜನರು ಭಾಗವಹಿಸುವುದು ಅಸಾಧ್ಯ: ಛಲವಾದಿ

Date:

Advertisements

ಪರಿಶಿಷ್ಟ ಜಾತಿಗಳ (ಎಸ್ಸಿ) ಜನಗಣತಿಯಲ್ಲಿ ಶೇ.50ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಗಣತಿ ನಡೆಯುತ್ತಿದೆ. ಆಗುತ್ತಿರುವ ಅನಾಹುತಗಳ ಬಗ್ಗೆ ಮಾಧ್ಯಮಗಳು ತಿಳಿಸುತ್ತಿವೆ. ನಮ್ಮ ಮನೆಗೂ ಯಾರೂ ಬಂದಿಲ್ಲ. ಆದರೆ, ಸ್ಟಿಕರ್ ಅಂಟಿಸಿ ಹೋಗಿದ್ದಾರೆ” ಎಂದು ಟೀಕಿಸಿದರು.

“ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ನಾವು ಒಪ್ಪಬಹುದಿತ್ತು; ಎಲ್ಲ ಮನೆಗಳಿಗೂ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಆನ್‍ಲೈನ್‍ನಲ್ಲೂ ಅವಕಾಶ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು; ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ; ಎಲ್ಲರೂ ವಿದ್ಯಾವಂತರಲ್ಲ” ಎಂದರು.

Advertisements

“ಕೆಲವರಿಗೆ ಸರ್ಟಿಫಿಕೇಟ್ ಇದೆ. ಇನ್ನೂ ಕೆಲವರಿಗೆ ಇಲ್ಲ ಎಂದು ತಿಳಿಸಿದರು. ಇದು ಸರಕಾರದ ಕಣ್ಣೊರೆಸುವ ತಂತ್ರವೇ ಹೊರತು ಇದರಲ್ಲಿ ಸರಿಯಾದ ಅಂಕಿಅಂಶ ಸಿಗಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿಗಳಿಗೆ ಅನ್ಯಾಯ ಮಾಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ” ಎಂದು ಆರೋಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಹಗ್ಗಜಗ್ಗಾಟ..

“ಈ ಸರಕಾರ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎನ್ನುವುದರಲ್ಲೇ ಇದೆ. ಜನರ ಕೆಲಸಗಳನ್ನು ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ಅನೇಕ ಜನರಿಗೆ ಮೂರ್ನಾಲ್ಕು ತಿಂಗಳಿನಿಂದ ಗ್ಯಾರಂಟಿ ಹಣ ಸಿಗುತ್ತಿಲ್ಲ. ಜೊತೆಗೆ ನಾನೇ 5 ವರ್ಷಕ್ಕೆ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಕುತ್ತು ಬಂದುದರ ಸಂಕೇತ” ಎಂದು ವಿಶ್ಲೇಷಿಸಿದರು.

“ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಹಗ್ಗಜಗ್ಗಾಟ ಆರಂಭವಾಗಿದೆ. ಅವರ ಪಕ್ಷದ ಪ್ರತಿಯೊಬ್ಬ ಶಾಸಕರೂ ಮುಖ್ಯಮಂತ್ರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ರಾಜು ಕಾಗೆಯವರು ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಅವರು ಮನೆಯಲ್ಲಿ ಇರುವುದೇ ಲೇಸು ಎಂದಿದ್ದಾರೆ. ನಿಮ್ಮ ಶಾಸಕರು ನಿಮ್ಮನ್ನು ಯಾವ ಮಟ್ಟಕ್ಕೆ ಗೌರವಿಸುತ್ತಿದ್ದಾರೆ” ಎಂದು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಸಚಿವರ ಪ್ರಚಾರದ ಗೀಳು

“ಕೆಲವು ಸಚಿವರು ಅವರ ಸಚಿವ ಸ್ಥಾನದ ವಿಚಾರದಲ್ಲಿ ಕೆಲಸ ಮಾಡುವುದನ್ನು ಬಿಟ್ಟು ಬಿಟ್ಟಿದ್ದಾರೆ. ಅವರು ಆರೆಸ್ಸೆಸ್, ಬಿಜೆಪಿಯನ್ನು ನಿಂದಿಸಬೇಕು; ಸುಳ್ಳು ಸುದ್ದಿ ಹಬ್ಬಿಸಬೇಕು. ದಿನವೂ ಟಿ.ವಿ. ಮಾಧ್ಯಮಗಳಲ್ಲಿ ನಮ್ಮ ಮುಖ ಬರುತ್ತಿರಬೇಕೆಂಬ ಗೀಳಿಗೆ ಬಿದ್ದಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ನಿಷೇಧದ ಮಾತನಾಡಿದ್ದಾರೆ. ನೀವು ಹುಟ್ಟಿದ ಮೇಲೆ ಆರೆಸ್ಸೆಸ್ ಹುಟ್ಟಿಲ್ಲ ಎಂಬುದನ್ನು ತಿಳಿದುಕೊಳ್ಳಿ. ಬಿಜೆಪಿ ಎಂಬ ಹೆಸರು ಮಾತ್ರ ನೀವು ಹುಟ್ಟಿದ ನಂತರ ಹುಟ್ಟಿರಬಹುದು” ಎಂದು ಹೇಳಿದರು.

“ಆರೆಸ್ಸೆಸ್‍ಗೆ 100 ವರ್ಷ ಆಗುತ್ತಿದೆ. ನೆಹರೂ, ಇಂದಿರಾ ಗಾಂಧಿ, ನಿಮ್ಮ ತಂದೆಯಿಂದ ಏನೂ ಮಾಡಲು ಆಗಿಲ್ಲ. ಬಡವರು ನರೇಗದಡಿ ಕೆಲಸ ಮಾಡಿ ಹಣ ಬಂದಿಲ್ಲವೆಂದು ಆರು ತಿಂಗಳಿಂದ ಕಾಯುತ್ತಿದ್ದಾರಲ್ಲವೇ? ಅದನ್ನು ಕೊಡಿಸುವ ಯೋಗ್ಯತೆ ನಿಮಗಿದೆಯೇ” ಎಂದು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X