ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

Date:

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ ಘಟನೆ ನಡೆದಿದ್ದು, ವಾಹನಗಳು, ಮನೆಗಳು, ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಅಲ್ಲದೇ ಸ್ಥಳದಲ್ಲಿ ಬಂದೋಬಸ್ತಿನಲ್ಲಿ ನಿಯೋಜಿತರಾಗಿದ್ದ ಪೊಲೀಸರು, ಮಾಧ್ಯಮದವರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
shimoga

ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು, ಕಲ್ಲು ತೂರಾಟ ಸಂಬಂಧ ಸುಮಾರು ಏಳು ಮಂದಿಯನ್ನು ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಘಟನೆಯ ವೇಳೆ ಲಘು ಲಾಠಿ ಪ್ರಹಾರ ಕೂಡ ನಡೆದಿದೆ ಎಂದು ವರದಿಯಾಗಿದೆ.

ಪರಿಸ್ಥಿತಿ ಕೈಮೀರುವ ಮುನ್ನ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿಯವರು 144 ಸೆಕ್ಷನ್‌ ಜಾರಿಗೊಳಿಸಿ, ನಿಷೇಧಾಜ್ಞೆ ಹೇರಿದ್ದಾರೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಅವರು ಮೊಕ್ಕಾಂ ಹೂಡಿದ್ದಾರೆ.

shimoga car kallu

ಗಾಂಧಿಬಜಾರ್ ಜಾಮೀಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯು ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ, ಸಿ.ಆರ್.ಎನ್.ರಸ್ತೆ, ಓಲ್ಡ್ ಬಾರ್ ಲೈನ್, ಪೆನ್ಯನ್ ಮೊಹಲ್ಲಾ, ಬಿ.ಎಚ್.ರಸ್ತೆ, ಮೀನಾಕ್ಷಿ ಭವನ, ಟ್ಯಾಂಕ್ ಮೊಹಲ್ಲಾ, ಟ್ಯಾಂಕ್ ಬಂಡ್ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತ, ಸೀನಪ್ಪ ಶೆಟ್ಟಿ ವೃತ್ತ, ನೆಹರು ರಸ್ತೆ, ಅಮೀರ್ ಅಹಮ್ಮದ್ ರಸ್ತೆ, ಬಿ.ಎಚ್.ರಸ್ತೆ, ಅಶೋಕ ವೃತ್ತ, ಎನ್.ಟಿ.ರಸ್ತೆ, ಗುರುದೇವ ರಸ್ತೆ, ಕ್ಲಾರ್ಕ್‌ಪೇಟೆ, ನೂರಾನಿ ಮಸೀದಿ, ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮ್ಮದ್ ವೃತ್ತ ತಲುಪಬೇಕಿತ್ತು. ಈ ನಡುವೆಯೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...