ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ, ಅವರ ನಾಯಕತ್ವ ಪಕ್ಷಕ್ಕೆ ಮುಖ್ಯ: ಡಿ ಕೆ ಶಿವಕುಮಾರ್

Date:

Advertisements

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವ ಪಕ್ಷಕ್ಕೆ ಮುಖ್ಯವಾಗಿದ್ದು, ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ದೆಹಲಿಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಏನಾದರೂ ಸಭೆ ಮಾಡುತ್ತೀರಾ ಎಂದು ಕೇಳಿದಾಗ, “ಇದೇ 10ರಂದು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಈ ಸಭೆ ಸಿದ್ದರಾಮಯ್ಯ ಅವರನ್ನು ಪಕ್ಷದ ಒಬಿಸಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವ ಬಗ್ಗೆ ಚರ್ಚೆಯೇ ಎಂದು ಕೇಳಿದಾಗ, “ಇಲ್ಲ, ಪಕ್ಷ ಸಂಘಟನೆ ವಿಚಾರವಾಗಿ ಈ ಸಭೆ ನಡೆಯಲಿದೆ. ಇನ್ನು ರಾಷ್ಟ್ರ ಮಟ್ಟದ ಒಬಿಸಿ ನಾಯಕರ ಸಭೆಯು ಇದೇ ತಿಂಗಳು 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕೆಪಿಸಿಸಿಯು ಈ ಸಭೆಯ ಆತಿಥ್ಯ ವಹಿಸಲಿದೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅವರು ಸಮಿತಿಯ ಮುಖ್ಯಸ್ಥರಲ್ಲದೇ ಇದ್ದರೂ, ದೇಶದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ” ಎಂದರು.

Advertisements

ಸಿಎಂ ಸ್ಥಾನ ಖಾಲಿ ಇಲ್ಲ

ಸಿಎಂ ಸ್ಥಾನಕ್ಕೆ ಶಾಸಕರು ನಿಮ್ಮನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಹೀಗಾಗಿ ಈ ವಿಚಾರವಾಗಿ ಈಗ ಚರ್ಚೆ ಮಾಡಲು ಇದು ಸಮಯವಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X