ಸಿದ್ದರಾಮಯ್ಯ‌ – ಪರಮೇಶ್ವ‌ರ್‌ಗೆ ನಿಂದನೆ ಆರೋಪ, ಪದ್ಮನಾಭ ಅಲಿಯಾಸ್‌ ಪದ್ದು ವಿರುದ್ಧ ಎಫ್‌ಐಆರ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಮಂತ್ರಿ ಡಾ. ಜಿ ಪರಮೇಶ್ವ‌ರ್ ಅವರಿಗೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಆರೋಪದ ಪದ್ಮನಾಭ ಅಲಿಯಾಸ್‌ ಪದ್ದು ಎಂಬುವರ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

“ಪದ್ಮನಾಭ ಅಲಿಯಾಸ್ ‘ಪದ್ದು’ ಎಂಬುವನು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲಾ ಖಾನ್ ಎಂದು ನಿಂದಿಸಿ ಹಾಗೂ ಗೃಹ ಮಂತ್ರಿ ಜಿ ಪರಮೇಶ್ವ‌ರ್ ರವರಿಗೂ ಸಹ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು, ತೂರಾಟ ಮಾಡಿರುವ ಘಟನೆಯನ್ನು ಉಲ್ಲೇಖಿಸಿ ಧರ್ಮಗಳ ನಡುವೆ ಸೌಹಾರ್ಧತೆಗೆ ದಕ್ಕೆ ಹಾಗೂ ದ್ವೇಷವನ್ನು ಉಂಟುಮಾಡುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ನಿಂದಿಸಿದ್ದಾನೆ” ಎಂದು ಆರೋಪಿಸಿ ಸುಂಕದಕಟ್ಟೆಯ ನಿವಾಸಿ, ಸಾಮಾಜಿಕ ಕಾರ್ಯಕರ್ತ ನವೀನ್‌ ಕುಮಾರ್‌ ದೂರು ನೀಡಿದ್ದಾರೆ.

ದಿನಾಂಕ 17/02/2025 ರಂದು ಸಂಜೆ 07-00 ಗಂಟೆ ಸಮಯದಲ್ಲಿ ನಾನು ಮೊಬೈಲ್ ನೋಡುತ್ತಿರುವಾಗ ವಾಟ್ಸ್ ಆಫ್ ಗ್ರೂಪ್‌ನಲ್ಲಿ ನನ್ನ ಸ್ನೇಹಿತರು ಒಂದು ವಿಡಿಯೋ ಕಳಿಸಿದ್ದು, ಸದರಿ ವಿಡಿಯೋ ನೋಡಿದಾಗ ಅದರಲ್ಲಿರುವ ಪದ್ದು ಎಂಬ ವ್ಯಕ್ತಿ ಸಮುದಾಯದ ವ್ಯಕ್ತಿಗಳನ್ನು ಪ್ರಚೋದಿಸಿರುತ್ತಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ರವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಕೋಮುಗಲಭೆ ಉಂಟುಮಾಡುವ ಪ್ರಯತ್ನ ನಡೆಸಿರುವ ಪದ್ಮನಾಭ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ನವೀನ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisements
ನವೀನ್ ಕುಮಾರ್ 1

“ಪದ್ಮನಾಭ ಅಲಿಯಾಸ್ ಪದ್ದು ಎಂಬ ವ್ಯಕ್ತಿ ಆರ್‌ಎಸ್‌ಎಸ್‌ ವಿಚಾರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದೇ ಈತನ ಕೆಲಸವಾಗಿದೆ. ಈ ಹುಡುಗನನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡ ಆರ್‌ಎಸ್‌ಎಸ್‌ ಕೆಟ್ಟ ಪದಗಳಲ್ಲಿ ನಿಂದಿಸುತ್ತಿದೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟದ ಹಿಂದೆಯೂ ಆರ್‌ಎಸ್‌ಎಸ್‌ ಇದೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ದೂರು ನೀಡಿದ್ದೇನೆ” ಎಂದು ನವೀನ್‌ ಕುಮಾರ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X