ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

Date:

  • ‘ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಿ’
  • ‘ಕುಮಾರಸ್ವಾಮಿ ವಿಶ್ವಾಸಾರ್ಹ ದಾಖಲೆ ಇಟ್ಟುಕೊಂಡು ಮಾತನಾಡಲಿ’

ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಎಚ್ ಡಿ ಕುಮಾರಸ್ವಾಮಿಯವರ ನಿದ್ದೆಗೆಡಿಸಿ, ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

- Advertisement -

ಕುಮಾರಸ್ವಾಮಿಯ ಸರಣಿ ಆರೋಪಗಳಿಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಅವರು, “ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿ ಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ?” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಎಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸಿ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ” ಎಂದಿದ್ದಾರೆ.

“ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಡಿಯೋ ವಿವೇಕಾನಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: ಕುಮಾರಸ್ವಾಮಿ ಪ್ರಶ್ನೆ

“ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್‌ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಎಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತಾ? ‘ಎಲ್ಲಿದಿಯಪ್ಪಾ ನಿಖಿಲ್’ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ವಾ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ರಾ?” ಎಂದು ತಿರುಗೇಟು ನೀಡಿದ್ದಾರೆ.

“ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಎಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?” ಎಂದು ಹರಿಹಾಯ್ದಿದ್ದಾರೆ.

“ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಎಚ್.ಡಿ.ಕುಮಾರಸ್ವಾಮಿಯವರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದ ಹಲವೆಡೆ ಒಣಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...