ಸಿಎಂ ನಿವಾಸ, ಬೆಂಗಳೂರು ಪಾಸ್‌ಪೋರ್ಟ್ ಕಚೇರಿಗೆ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ

Date:

Advertisements

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಮತ್ತು ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಶುಕ್ರವಾರ ಮುಂಜಾನೆ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಬಂದಿದೆ. ದೌಡಿ ಶಂಕರ್ ಜಿವಾಲ್’ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯ ಹೆಸರಲ್ಲಿ ಬೆದರಿಕೆ ಇಮೇಲ್‌ ಬಂದಿದೆ. ಮಧ್ಯಾಹ್ನ 3:15ರ ಹೊತ್ತಿಗೆ ಬಾಂಬ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

ಇನ್ನು ಇಮೇಲ್‌ನಲ್ಲಿ ಈ ಯೋಜಿತ ದಾಳಿಯನ್ನು ‘ಪವಿತ್ರ ಘಟನೆ’ ಎಂದು ಉಲ್ಲೇಖಿಸಲಾಗಿದೆ. ವಿವಾದಾತ್ಮಕ ತಮಿಳು ಯೂಟ್ಯೂಬರ್ ಸವುಕ್ಕು ಶಂಕರ್ ಬಂಧನ ಮತ್ತು 26/11 ಭಯೋತ್ಪಾದಕ ಅಜ್ಮಲ್ ಕಸಬ್‌ನ ಮರಣದಂಡನೆ ವಿರುದ್ಧವಾಗಿ ಈ ದಾಳಿ ನಡೆಸಲಾಗುತ್ತದೆ ಎಂದೂ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

Advertisements

ಇಮೇಲ್ ಬಂದ ಕೆಲವೇ ಸಮಯದಲ್ಲಿ ಕೋರಮಂಗಲ ಪೊಲೀಸರು ಪಾಸ್‌ಪೋರ್ಟ್ ಕಚೇರಿ ಆವರಣದಲ್ಲಿ ಶೋಧ ನಡೆಸಿದ್ದಾರೆ. ಹಾಗೆಯೇ ಇದು ಹುಸಿ ಬೆದರಿಕೆ ಎಂದಿದ್ದಾರೆ. ಸದ್ಯ ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಮತ್ತು ಕಳುಹಿಸಿದವರ ಗುರುತು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ಮುನ್ನೆಚ್ಚರಿಕೆಯಾಗಿ ಮುಖ್ಯಮಂತ್ರಿಯವರ ನಿವಾಸ ಮತ್ತು ಪಾಸ್‌ಪೋರ್ಟ್ ಕಚೇರಿಯ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. 2024ರ ಮಾರ್ಚ್‌ನಲ್ಲಿ ಸಿದ್ದರಾಮಯ್ಯ ಮತ್ತು ಇತರ ಇಬ್ಬರು ಸಂಪುಟ ಸಚಿವರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಇಡೀ ನಗರವೇ ಸ್ಫೋಟದಿಂದ ನಡುಗುತ್ತದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X