SIR | ಬಂಗಾಳದಲ್ಲಿ ಬಳಸಿದ ಸಾಫ್ಟ್‌ವೇರ್ ಇಲ್ಲಿ ಬಳಸಬೇಡಿ: ಸಾಹಿತಿ-ಲೇಖಕ ಬಳಗದಿಂದ ಬಹಿರಂಗ ಪತ್ರ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಪಶ್ಚಿಮ ಬಂಗಾಳದಲ್ಲಿ ಬಳಸಿದ ತಾರ್ಕಿಕ ವ್ಯತ್ಯಾಸ(ಲಾಜಿಕಲ್ ಡಿಸ್ಕ್ರಿಪೆನ್ಸಿ) ಸಾಫ್ಟವೇರ್ ಅನ್ನು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಳಸಬಾರದು ಎಂದು ಸಾಹಿತಿ-ಲೇಖಕ ಬಳಗವು ರಾಜ್ಯದ ಚುನಾವಣಾ ಆಯೋಗಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ. ಹಾಗೆಯೇ ಈ ಬಳಗವು ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿರೋಧ ಸಮಾವೇಶಕ್ಕೂ ಬೆಂಬಲ ಸೂಚಿಸಿದೆ.

- Advertisement -

“ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸುವಾಗ ಸಮಾನ ಮತದಾನದ ಹಕ್ಕನ್ನು ನಾವು ಪಡೆದುಕೊಂಡಿರುವ ರಾಜಕೀಯ ಸ್ವಾತಂತ್ರ್ಯ ಎಂದು ಹೇಳಿದ್ದರು. ‘ಎಲ್ಲರಿಗೂ ಒಂದು ಮತ, ಒಂದು ಮತ ಒಂದು ಮೌಲ್ಯ’ ಎನ್ನುವುದನ್ನು ಇಲ್ಲಿಯವರೆಗೂ ಎಲ್ಲ ಚುನಾವಣಾ ಆಯೋಗ ಪಾಲಿಸಿ ಕೊಂಡು ಬಂದಿದ್ದವು”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಎಸ್‌ಐಆರ್‌ಗೆ ಪ್ರವೇಶ ಪತ್ರ, ತೇರ್ಗಡೆ ಪ್ರಮಾಣಪತ್ರವೂ ಗುರುತಿನ ಚೀಟಿ: ಸುಪ್ರೀಂ ಕೋರ್ಟ್

“ಆದರೆ ಈಗ ಭಾರತ ಚುನಾವಣಾ ಆಯೋಗದ ಮೂಲಕ ಜಾರಿ ಮಾಡಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆಯು ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿ, ಎಲ್ಲಾ ಜಾತಿಯ ಬಡವರು ದೊಡ್ಡ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ. ಇಲ್ಲಿಯವರೆಗೂ ಇಲ್ಲದ ಹೊಸ ದಾಖಲೆಗಳ ಕಾರಣ ನೀಡಿ ಅರ್ಹ ಪ್ರಜೆಗಳ ಮತದಾನದ ಹಕ್ಕನ್ನು ಅವರ ಜೀವಿತ ಕಾಲದಲ್ಲಿಯೇ ನಿರಾಕರಿಸುತ್ತಿರುವುದು ಪ್ರಜಾತಂತ್ರದ ಕಗ್ಗೊಲೆಯಾಗಿದೆ. ಅಷ್ಟೇ ಅಲ್ಲದೇ ಈ ಹಿಂದೆ ಬಿಜೆಪಿ ಸರ್ಕಾರ ಪ್ರಯತ್ನಿಸಿ ವಿಫಲಗೊಂಡ ಸಿಎಎ, ಎನ್‌ಆರ್‌ಸಿಯನ್ನು ಜಾರಿಗೊಳಿಸುವ ಪೌರತ್ವ ಪರೀಕ್ಷೆಯ ಪರೋಕ್ಷ ಕಾರ್ಯಚರಣೆಯಂತಾಗಿದೆ” ಎಂದು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

“ಈಗಾಗಲೇ SIRನಿಂದಾಗಿ ಹಲವು ರಾಜ್ಯಗಳಲ್ಲಿ 20 ಲಕ್ಷದಿಂದ ಆರಂಭಿಸಿ 3 ಕೋಟಿಯ ತನಕ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರಗಿಡಲಾಗಿದೆ. ಇದು ನುಸುಳುಕೋರರನ್ನು ಪತ್ತೆ ಹಚ್ಚುವುದರ ಬದಲಿಗೆ ದೊಡ್ಡ ಸಂಖ್ಯೆಯಲ್ಲಿ ಪೌರತ್ವದ ಹಕ್ಕು ಇಲ್ಲದ ಎರಡನೇ ದರ್ಜೆಯ ಜನ ವರ್ಗವನ್ನು ಸೃಷ್ಟಿಸುವ ಅಜೆಂಡಾ ಆಗಿದೆಯೇ ಎನ್ನುವ ಆತಂಕ ನಮ್ಮನ್ನು ಕಾಡುತ್ತಿದೆ. ರಾಜ್ಯ ಸರಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಶರಣರ, ಸೂಫಿ, ಸಂತರ, ಕುವೆಂಪು ನಾಡಿನಲ್ಲಿ ಇಂತಹ ಅನ್ಯಾಯ ನಡೆಯಲು ಯಾವುದೇ ಕಾರಣಕ್ಕೂ ಬಿಡಬಾರದು” ಎಂದು ಮನವಿ ಮಾಡಿದ್ದಾರೆ.

“ಪಶ್ಚಿಮ ಬಂಗಳಾದಲ್ಲಿ ಬಳಸಿದ ತಾರ್ಕಿಕ ವ್ಯತ್ಯಾಸ(ಲಾಜಿಕಲ್ ಡಿಸ್ಕ್ರಿಪೆನ್ಸಿ) ಸಾಫ್ಟವೇರ್ ಅನ್ನು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಳಸಬಾರದು. ಕರಡು ಪಟ್ಟಿ ತಯಾರಾದ ನಂತರ ಗ್ರಾಮ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಬೇಕು. ಮತದಾರರ ಪಟ್ಟಿಯನ್ನು ಮೆಷಿನ್ ರೀಡಬಲ್ ಫಾರ್ಮ್ಯಾಟ್ ಮೂಲಕ ಪಾರದರ್ಶಕತೆ ಪಾಲಿಸಬೇಕು. ಮನವಿ/ ಆಕ್ಷೇಪಣೆ ಸಲ್ಲಿಸಲು-ಅಗತ್ಯ ದಾಖಲೆ ಒದಗಿಸಲು ಕನಿಷ್ಠ 6 ತಿಂಗಳ ಸಮಯವಕಾಶ ನೀಡಬೇಕು” ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಲಾಗಿದೆ.

ಇದನ್ನು ಓದಿದ್ದೀರಾ? ಶಹಾಪುರದಲ್ಲಿ ಎಸ್‌ಐಆರ್ ವಿರೋಧಿ ಹೋರಾಟದ ಕಹಳೆ; ಬೈಕ್ ರ‍್ಯಾಲಿ ಮೂಲಕ ಜನಜಾಗೃತಿ

ಹಾಗೆಯೇ “ಸ್ಥಳೀಯ ಚುನಾವಣೆಗಳು ಬರುತ್ತಿರುವುದರಿಂದ ಮತ್ತು ಜನರಲ್ಲಿ ಆತಂಕ ಇರುವುದರಿಂದ ನೀವು ಮಾಸ್ಟರ್ ರೋಲಿನ ಸುಧಾರಣೆಯನ್ನು ಪರಿಣಾಮಕಾರಿಯಾಗಿ ಮಾಡಿಸಲು ವಿಶೇಷ ಗಮನ ನೀಡಬೇಕು. ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಇರುವಂತೆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಗ್ರಾಮ ಸಭೆಗಳನ್ನು ಹಾಗೂ ವಾರ್ಡ್ ಸಭೆಗಳನ್ನು ಕರೆದು ತಿದ್ದುಪಡಿಗಳನ್ನು ಸ್ವೀಕರಿಸಿ, ಸಾರ್ವಜನಿಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿ ಮಾಡಿಯೇ ಅಂತಿಮಗೊಳಿಸಬೇಕು” ಎಂದು ರಾಜ್ಯ ಸರ್ಕಾರವನ್ನು ಸಾಹಿತಿ-ಲೇಖಕ ಬಳಗ ಆಗ್ರಹಿಸಿದೆ.

“ಈ ಗ್ರಾಮ/ವಾರ್ಡ್ ಸಭೆಗಳನ್ನು ಆಯೋಗ ರೂಪಿಸಿರುವ ಸಾಮಾಜಿಕ ಪರಿಶೀಲನೆಯ ಮಾನದಂಡಗಳನ್ನು ಅನ್ವಯಿಸಿ ನಡೆಸಬೇಕು. ಆ ಮೂಲಕ ರಾಜ್ಯ ಚುನಾವಣಾ ಆಯೋಗದ ಪಟ್ಟಿಗೆ ಹೆಚ್ಚಿನ ಖಚಿತತೆ ಹಾಗೂ ಮಾನ್ಯತೆ ಬರುವಂತೆ ನೋಡಿಕೊಳ್ಳಬೇಕು. ಸಾರಾಂಶದಲ್ಲಿ ರಾಜ್ಯದ ಯಾವ ಅರ್ಹ ಮತದಾರರು ಕೂಡ ಹೊರಗೆ ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸರ್ಕಾರ ಹೊರಬೇಕು” ಎಂದು ಸಾಹಿತಿ-ಲೇಖಕ ಬಳಗ ಒತ್ತಾಯಿಸಿದೆ.

ಇನ್ನು ಶನಿವಾರ ಜೂನ್‌ 20ರಂದು ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವ SIR ವಿರೋಧಿ ಪ್ರತಿರೋಧ ಸಮಾವೇಶಕ್ಕೆ ಆಗಮಿಸಿ ನಾಗರಿಕ ಸಮಾಜದ ಪ್ರಶ್ನೆಗಳಿಗೆ ಸಾರ್ವಜನಿಕ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಅಧಿಕಾರಿ ಅನ್ಬುಕುಮಾರ್‌ ಅವರಿಗೆ SIR ವಿರೋಧಿ ಕರ್ನಾಟಕ ಪರವಾಗಿ ಪ್ರಗತಿಪರ ಚಿಂತಕರಾದ ನಗರಗೆರೆ ರಮೇಶ್‌, ಬರಗೂರು ರಾಮಚಂದ್ರಪ್ಪ, ಬಿ ಸುರೇಶ್, ಅಮ್ಜದ್‌ ಪಾಷ, ತಾರಾ ರಾವ್‌ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...