‘ಸುಳ್ಳು ಸುದ್ದಿ ಬಿತ್ತುವುದು ಪತ್ರಿಕೋದ್ಯಮವಲ್ಲ’; ಹೇಳಿಕೆ ತಿರುಚಿದವರ ವಿರುದ್ಧ ಕಠಿಣ ಕ್ರಮ: ಪ್ರಿಯಾಂಕ್‌ ಖರ್ಗೆ

Date:

ಪೊಲೀಸ್ ನೇಮಕಾತಿ ಪರೀಕ್ಷೆಗಳ ಕುರಿತು ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿ ಸುಳ್ಳು ಮಾಹಿತಿ ಹರಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ವಿಜಯಪುರ ಘಟನೆಗೆ ಸಂಬಂಧಿಸಿ ಬಿಜೆಪಿ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಮ್ಮ ರಾಜೀನಾಮೆ ಕೇಳಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತಾವು ಉತ್ತರಿಸಿದ್ದೇ ಹೊರತು, ವಿದ್ಯಾರ್ಥಿಗಳ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ನನಗೆ ಕೇಳಿದ ಪ್ರಶ್ನೆ, ‘ವಿಜಯಪುರ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಿಮ್ಮ ಪ್ರತಿಕ್ರಿಯೆ ಏನು?’ ಎಂಬುದಾಗಿತ್ತು. ಅದಕ್ಕೆ ನಾನು, ‘ನನ್ನ ರಾಜೀನಾಮೆ ಕೇಳಿ ಬಿಜೆಪಿ 25 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದರೆ, ನಾನು ರಾಜೀನಾಮೆ ಬಗ್ಗೆ ಯೋಚಿಸುತ್ತೇನೆ’ ಎಂದು ಉತ್ತರಿಸಿದ್ದೆ. ಈ ಹೇಳಿಕೆ ಬಿಜೆಪಿಯ ರಾಜಕೀಯ ನಾಟಕಕ್ಕೆ ಸಂಬಂಧಿಸಿದ್ದೇ ಹೊರತು, ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದಲ್ಲ” ಎಂದು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಖರ್ಗೆ, ಪಿಎಸ್‌ಐ ನೇಮಕಾತಿ ಹಗರಣ ನಡೆದಿದ್ದು ಬಿಜೆಪಿ ಆಡಳಿತಾವಧಿಯಲ್ಲೇ ಎಂದು ಆರೋಪಿಸಿದ್ದಾರೆ. ಅಂದು ವಿಧಾನಸೌಧವನ್ನು “ವ್ಯಾಪಾರ ಸೌಧ”ವನ್ನಾಗಿ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಯುವ ಪ್ರತಿಯೊಂದು ನೇಮಕಾತಿ ಪರೀಕ್ಷೆಯಲ್ಲೂ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನ್ಯಾಯಸಮ್ಮತತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಸೇರಿದಂತೆ 60 ರಾಷ್ಟ್ರಗಳ ಮೇಲಿನ ಟ್ರಂಪ್ ಹೊಸ ಸುಂಕಕ್ಕೆ ಅಮೆರಿಕದಲ್ಲೇ ವಿರೋಧ

ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿ ಪ್ರಸಾರ ಮಾಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. “ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಮಾತ್ರವಲ್ಲದೆ, ಹಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಈ ಸುಳ್ಳು ಮಾಹಿತಿ ಹರಡಲಾಗಿದೆ. ಸುಳ್ಳು ಸುದ್ದಿ ಪತ್ರಿಕೋದ್ಯಮವಲ್ಲ; ಅದು ಜನರನ್ನು ದಾರಿ ತಪ್ಪಿಸುವ ಹಾಗೂ ಸಾರ್ವಜನಿಕ ನಂಬಿಕೆಯನ್ನು ಕುಂದಿಸುವ ದುರುದ್ದೇಶದ ತಪ್ಪು ಮಾಹಿತಿ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ದಯವಿಟ್ಟು ಸಂಪೂರ್ಣ ಸಂಭಾಷಣೆಯನ್ನು ಸಾರ್ವಜನಿಕರ ಮುಂದೆ ಇಡಿ. ನನ್ನ ಮುಂದೆ ಮೈಕ್ ಹಿಡಿಯುವ ಮೊದಲು ಏನು ಮಾತುಕತೆ ನಡೆಯಿತು? ಯಾವ ವಿದ್ಯಾರ್ಥಿಗಳು ನನ್ನ ರಾಜೀನಾಮೆ ಕೇಳಿದ್ದರು? ರಾಜೀನಾಮೆ ಕೇಳಿದ್ದು ಬಿಜೆಪಿ, ಅದಕ್ಕೆ ನಾನು ಉತ್ತರಿಸಿದ್ದೆ. ಕನ್ನಡ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣ ಹೇಳಿಕೆಯನ್ನು ದಾಖಲಿಸಿದ್ದರೂ, ಕೆಲವರು ಮಾತ್ರ ಆಯ್ದ ಭಾಗವನ್ನು ತೋರಿಸಿ ತಿರುಚಿ ಬಿಂಬಿಸಿದ್ದಾರೆ. ಈಗ ತನಿಖೆ ಆರಂಭವಾಗಿರುವುದರಿಂದ ಆಯ್ದ ತುಣುಕುಗಳನ್ನು ಅಲ್ಲ, ಸಂಪೂರ್ಣ ವಾಸ್ತವಾಂಶವನ್ನು ತನಿಖೆಯ ಮುಂದೆ ಇಡಿ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...