ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಡಾ. ಜಿ ಪರಮೇಶ್ವರ್ ಎಚ್ಚರಿಕೆ

Date:

ನಮ್ಮ‌ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. ಶೇ. 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ, ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು ಶೇ. 40 ರಷ್ಟು ಕಮಿಷನ್ ಆರೋಪ ಮಾಡಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ನೋಂದಾಯಿತ ಸಂಘವು ಅಧಿಕೃತವಾಗಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಾಗ ನಾವು ಕೂಡ ಪಕ್ಷವಾಗಿ ಜನರ ಹಿತದೃಷ್ಟಿಯಿಂದ ಪ್ರಶ್ನೆ ಮಾಡಿದ್ದೇವೆ. ಯಾವ ಆಧಾರದ ಮೇಲೆ ಶೇ. 40 ರಷ್ಟು ಕಮಿಷನ್ ನಡೆದಿಲ್ಲ ಎನ್ನುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಬರೀ ಈ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನು ಬೇಕಾದರೂ ಮಾಡಬಹುದು. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮುಂದಕ್ಕೆ ಯಾವ ರೀತಿ ತೆಗೆದುಕೊಳ್ಳುತ್ತದೆ ಎಂದು ಈಗ ಊಹೆ ಮಾಡಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಶಾಂತಿ ಕದಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಬಿಜೆಪಿಯವರ ಪ್ರಯತ್ನದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೆಲ್ಲ ಸಾಧ್ಯವಿಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿ ಕಳೆದ ಒಂದೂವರೆ ವರ್ಷದಿಂದ ಶಾಂತಿಯನ್ನು ಕಾಪಾಡಿಕೊಂಡು ಬಂದಿದೆ. ರಾಜ್ಯದಲ್ಲಿ ಶಾಂತಿ ಕದಡಲು ಅಥವಾ ಶಾಂತಿ ಭಂಗ ಮಾಡಲು ಪ್ರಯತ್ನಿಸಿದರೆ ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತೇವೆಯೇ ಎಂದು ಎಂದು ಪ್ರಶ್ನಿಸಿದ್ದಾರೆ.

ಶಾಸಕರಿಗೆ 50 ಕೋಟಿ ರೂ. ಆಮಿಷದ ಕುರಿತು ಸಿಎಂ ಆರೋಪದ ಬಗ್ಗೆ ಬಿಜೆಪಿಯವರು ದಾಖಲೆ ಕೇಳಿರುತ್ತಿರುವ ವಿಚಾರಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ 200 ಕೋಟಿ ರೂ. ಆರೋಪಕ್ಕೆ ದಾಖಲೆ ಕೊಟ್ಟಿದ್ದಾರೆಯೇ? 200 ಕೋಟಿ ರೂ. ಆರೋಪಕ್ಕೆ ದಾಖಲೆಗಳನ್ನು ಕೊಡಿ ಎಂದು ರಾಜ್ಯ ಬಿಜೆಪಿ ಮುಖಂಡರು ಪ್ರಧಾನಮಂತ್ರಿಯನ್ನು ಕೇಳಲಿ. ಆನಂತರ ನಾವು ದಾಖಲೆಗಳನ್ನು ಕೊಡುತ್ತೇವೆ ಎಂದು ಕುಟುಕಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಗೆಲ್ಲುತ್ತದೆ. ಬಿಜೆಪಿಯವರು ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿರುವುದಕ್ಕೆ ದಾಖಲೆಗಳು ಬೇಕಲ್ಲವೇ? ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಕೇಸ್ ದಾಖಲಿಸುವುದಾಗಿ ಸಿಎಂ ಹೇಳಿದ್ದಾರೆ‌. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ. ಶಕ್ತಿ ಯೋಜನೆಯಲ್ಲಿ 3.50 ಕೋಟಿ ರೂ. ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ‌. ಇದಕ್ಕೆ ಏನು ಮಾಡಿಲ್ಲ ಎಂದು ಹೇಳಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...