ಜಿಪಂ ಸದಸ್ಯನ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ

Date:

Advertisements

ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ.

ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ

ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದೆ.

Advertisements

ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಆದರೆ, ಈ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದು, ಸಾಕ್ಷಿಗಳಿಗೆ 1 ಲಕ್ಷ ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದಿಗೆ ಮನವಿ ಮಾಡಿತ್ತು. ಇದೀಗ ಸಿಬಿಐ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್​, ವಿನಯ್​ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ತಮ್ಮ ಒಡೆತನದ ಜಿಮ್​ನಲ್ಲಿಯೇ ಜೂನ್ 15, 2016ರಲ್ಲಿ ಯೋಗೇಶ್​ ಗೌಡ ಅವರ ಕೊಲೆ ನಡೆದಿತ್ತು. ಆಗ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಪ್ರಕರಣ ಸಂಬಂಧ ನವೆಂಬರ್ 5, 2020ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಕೊಲೆ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಬಂಧನದ ಬಳಿಕ ಹಲವು ಬಾರಿ ವಿನಯ್ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಧಾರವಾಡ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಬಳಿಕ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸುವಂತೆ ವಿನಯ್ ಮನವಿ ಮಾಡಿದ್ದರು.

ಅಲ್ಲಿಯೂ ಜಾಮೀನು ಅರ್ಜಿ ವಜಾ ಅಗಿತ್ತು. ಕೊನೆಗೆ ಸುಪ್ರೀಂಕೋರ್ಟ್​ನಿಂದ ಆಗಸ್ಟ್​ 11ರಂದು ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಧಾರವಾಡಕ್ಕೆ ಬರಬಾರದು ಎಂದು ಷರತ್ತು ವಿಧಿಸಿ ಸುಪ್ರೀಂ ಕೋರ್ಟ್​ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X