ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Date:

Advertisements

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

Advertisements

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ. ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಚಿವ ಪ್ರಿಯಾಂಕ ಖರ್ಗೆ, ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ. ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X