ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

Date:

ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಂಬಂಧಿತ ಎಲ್ಲಾ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿರುವುದು ಕನ್ನಡಿಗರ ಭಾಷಾ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಮುಂದಾಗುವ ಯಾವುದೇ ಸಂಸ್ಥೆ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಭಾಷಾ ಹಕ್ಕುಗಳಿಗೆ ಗೌರವ ನೀಡುವುದು ತನ್ನ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿಗಳು ಮತ್ತು ಮಾಹಿತಿ ದಾಖಲೆಗಳು ಕನ್ನಡದಲ್ಲಿ ಲಭ್ಯವಿಲ್ಲದಿರುವುದು ಕನ್ನಡಿಗರ ಹಕ್ಕುಗಳನ್ನು ನಿರ್ಲಕ್ಷಿಸುವ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಟಾಟಾ ಪವರ್ ಸಂಸ್ಥೆಯ ಪ್ರತಿನಿಧಿಗಳು ಈಗಾಗಲೇ ಮನೆಮನೆಗೆ ಭೇಟಿ ನೀಡಿ ವಿದ್ಯುಚ್ಛಕ್ತಿ ಪೂರೈಕೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುವ ಕಾರ್ಯ ಆರಂಭಿಸಿದ್ದು, ಈ ಸಂದರ್ಭದಲ್ಲಿ ಬಳಸಲಾಗುತ್ತಿರುವ ನಮೂನೆಗಳು ಸಹ ಆಂಗ್ಲ ಭಾಷೆಯಲ್ಲಿವೆ. ಇದರಿಂದ ಸಾಮಾನ್ಯ ಕನ್ನಡಿಗರಿಗೆ ದಾಖಲೆಗಳ ಉದ್ದೇಶ, ಅಂಶಗಳು ಹಾಗೂ ಅದರ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ಬಿಳಿಮಲೆ ಹೇಳಿದ್ದಾರೆ.

ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಮಾಹಿತಿಗಳು ಕನ್ನಡದಲ್ಲಿಯೂ ಲಭ್ಯವಾಗುವುದು ನಾಗರಿಕರ ಹಕ್ಕು. ವಿದ್ಯುತ್ ಬಿಲ್ಲುಗಳು ಹಾಗೂ ವಿದ್ಯುಚ್ಛಕ್ತಿ ಸೇವೆಗೆ ಸಂಬಂಧಿಸಿದ ದಾಖಲೆಗಳು ಜನಜೀವನದ ಮಹತ್ವದ ಭಾಗವಾಗಿರುವುದರಿಂದ ಬಳಕೆದಾರರು ಈ ವಿಷಯದಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ವಿದ್ಯುತ್ ವಿತರಣಾ ಪರವಾನಿಗೆ ವಿರೋಧಿಸಿ ಜೂ.18ರಂದು ರಾಜ್ಯಾದ್ಯಂತ ರೈತ ಸಂಘ ಪ್ರತಿಭಟನೆ

ಮನೆಮನೆಗೆ ಭೇಟಿ ನೀಡುವ ಸಂಸ್ಥೆಯ ಪ್ರತಿನಿಧಿಗಳು ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನೀಡಿದಲ್ಲಿ ನಾಗರಿಕರು ಅದನ್ನು ಕನ್ನಡದಲ್ಲಿಯೇ ಒದಗಿಸುವಂತೆ ಒತ್ತಾಯಿಸಬೇಕು ಎಂದು ಬಿಳಿಮಲೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?ಹುಣಸೂರು | ಟಾಟಾ ಪವರ್ ವಿದ್ಯುತ್ ವಿತರಣಾ ಪರವಾನಿಗೆ ಅರ್ಜಿ ತಿರಸ್ಕರಿಸಲು ಆಗ್ರಹ

ಈ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ತಕ್ಷಣ ಕ್ರಮ ಕೈಗೊಂಡು, ಟಾಟಾ ಪವರ್ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕನ್ನಡದಲ್ಲಿಯೂ ಪ್ರಕಟಿಸುವಂತೆ ನಿರ್ದೇಶನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ದೊರೆಯಬೇಕು ಮತ್ತು ಸಾರ್ವಜನಿಕ ಸೇವೆಗಳ ಎಲ್ಲ ದಾಖಲೆಗಳು ಕನ್ನಡಿಗರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಲಭ್ಯವಾಗಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...