ತಾಪಮಾನ ಏರಿಕೆ | ಬತ್ತಿಹೋಗುತ್ತಿವೆ ಜಲಮೂಲಗಳು; 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

Date:

Advertisements

ಬೇಸಿಗೆಯ ಬಿಸಿಲಿನ ನಡುವೆಯೂ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಜಲಮೂಲಗಳು ಬತ್ತಿಹೋಗುತ್ತಿವೆ. ಹೀಗಾಗಿ, 16 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಈಗಾಗಲೇ, ಹಲವು ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿಯೂ ನೀರಿನ ಸಮಸ್ಯೆ ವಿಪರೀತಗೊಳ್ಳುತ್ತಿದೆ. ಉತ್ತರ ಕರ್ನಾಟಕದಲ್ಲಿ ಭಾಗದಲ್ಲಿ ಕೆರೆಗಳು, ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಜನರಿಗೆ ಮಾತ್ರವಲ್ಲದೆ, ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ.

ಕರ್ನಾಟಕದ 236 ತಾಲೂಕುಗಳ ಪೈಕಿ 48 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದರಾಗಿದೆ. ಕಲಬುರಗಿ, ಯಾದಗಿರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಬಿಗಡಲಾಯಿಸಿದೆ.

Advertisements

ಮೇ ಆರಂಭದ ವೇಳೆಗೆ ನೀರಿನ ಸಮಸ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನೀರಿನ ಬವಣೆಯನ್ನು ನೀಗಿಸಲು ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲು ನೀರಿನ ಸಮಸ್ಯೆಯಿರುವ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಖಾತೆಯಿಂದ ಹಣ ಬಿಡುಗಡೆ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ, ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಎಂಜಿನಿಯರ್‌ಗಳು ಪಿಡಿಒಗಳ ಜೊತೆ ಸಮಾಲೋಚನೆ ನಡೆಸಿ, ಕುಡಿಯುವ ನೀರು ಪೂರೈಕೆ ಮತ್ತು ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X