ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

Date:

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ, ತುಳು ಭಾಷೆಗೆ ಸಂವಿಧಾನಾತ್ಮಕ ಸ್ಥಾನಮಾನ ಕಲ್ಪಿಸುವ ಕುರಿತು ಸರ್ಕಾರ ಘೋಷಿಸುವ ಸಾಧ್ಯತೆ ಇದೆ.

- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ತುಳು ಭಾಷೆಗೆ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಕಾನೂನಾತ್ಮಕ ಚೌಕಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತುಳು ಕೇವಲ ಕರಾವಳಿಯ ಭಾಷೆಯಷ್ಟೇ ಅಲ್ಲ, ಅದು ಕರ್ನಾಟಕದ ಸಮೃದ್ಧ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗ. ‘ಯಾನ್ ಏಪಲಾ ಜನಕ್ಲೆನ ಭಾವನೆಲೆನ ಒಟ್ಟುಗು ಇಪ್ಪುನಿ’ (ನಾನು ಎಂದಿಗೂ ಜನರ ಭಾವನೆಗಳೊಂದಿಗೆ ಇರುತ್ತೇನೆ)” ಎಂದು ತುಳುವಿನಲ್ಲೇ ಆಶ್ವಾಸನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ತುಳು ಭಾಷೆಯ ಇತಿಹಾಸ, ಲಿಪಿ, ಸಾಹಿತ್ಯ ಹಾಗೂ ಶಾಸನಗಳ ಕುರಿತು ಡಾ. ಮೋಹನ್ ಆಳ್ವ ನೇತೃತ್ವದ ತಜ್ಞರ ಸಮಿತಿಯು ಸಲ್ಲಿಸಿದ್ದ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಇದರ ಜೊತೆಗೆ, ಇತರ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ನೀಡಲಾಗಿರುವ ಅಧಿಕೃತ ಸ್ಥಾನಮಾನದ ಮಾದರಿಯನ್ನು ಅಧ್ಯಯನ ಮಾಡಲು ನೇಮಿಸಲಾಗಿದ್ದ ತಂಡವು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಕಾನೂನು ಚೌಕಟ್ಟನ್ನು ಪರಿಶೀಲಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಈ ಎಲ್ಲ ವರದಿಗಳನ್ನು ಆಧರಿಸಿದೆ ತುಳು ಭಾಷೆಗೆ 2ನೇ ಭಾಷಾ ಸ್ಥಾನಮಾನ ನೀಡಲು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ.

ಶುಕ್ರವಾರ, ಮಂಗಳೂರಿನಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ತುಳು ಭಾಷೆ ಕುರಿತ ಸರ್ಕಾರ ನಿರ್ಧಾರವನ್ನು ಘೋಷಿಸುವ ನಿರೀಕ್ಷೆ ಇದೆ. ಸರ್ಕಾರದ ಇಚ್ಛಾಶಕ್ತಿ ಮತ್ತು ನಿರ್ಧಾರವನ್ನು ತುಳು ಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದ್ದಾರೆ. ದಶಕಗಳ ನಿರಂತರ ಹೋರಾಟಕ್ಕೆ ಕೊನೆಗೂ ತರ್ಕಬದ್ಧ ಫಲ ಸಿಗುವ ಭರವಸೆ ಮೂಡಿದೆ ಎಂದು ಸಂಘಟನೆಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...

ಉಡುಪಿ | ಸಂವಿಧಾನದ ಮೌಲ್ಯಗಳ ಅರಿವಿದ್ದಾಗ ಮಾತ್ರ ಶಿಸ್ತುಬದ್ಧ ಜೀವನ ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

ಸಂವಿಧಾನದ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು...