ತುಂಗಭದ್ರಾ | ‘ಮಾಧ್ಯಮದವರಿದ್ದರೆ ಗೇಟ್ ಅಳವಡಿಕೆ ಕಾರ್ಯ ಮಾಡಲ್ಲ’ ಎಂದ ಕನ್ನಯ್ಯ ನಾಯ್ಡು!

Date:

Advertisements

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯದ ವೇಳೆ ಮಾಧ್ಯಮದವರು ದೂರದಲ್ಲೂ ಇರಕೂಡದು, ಅವರು ಇದ್ದರೆ ಕೆಲಸ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಮುಖ್ಯ ಸಲಹೆಗಾರ ಕನ್ನಯ್ಯ ನಾಯ್ಡು ಹೇಳಿರುವುದಾಗಿ ವರದಿಯಾಗಿದೆ.

ಧುಮ್ಮುಕ್ಕಿ ಹರಿಯುತ್ತಿರುವ ಅಣೆಕಟ್ಟೆಯ ತೂಬಿನಲ್ಲಿ ಗೇಟ್ ಅಳವಡಿಸುವುದು ದೇಶದ ಇತಿಹಾಸದಲ್ಲೇ ಪ್ರಮುಖ ಘಟನೆ. ಇದರಲ್ಲಿ ಸ್ವಲ್ಪ ಹೆಚ್ಚುಕಮ್ಮಿ ಆದುದು ವರದಿಯಾಗಿಬಿಟ್ಟರೆ ಬಹಳ ದೊಡ್ಡ ಮುಜುಗರದ ಸ್ಥಿತಿಯಾಗುತ್ತದೆ. ಜೊತೆಗೆ ಇದು ಹಕ್ಕು ಸ್ವಾಮ್ಯದ ವಿಚಾರವೂ ಹೌದು. ಹೀಗಾಗಿ ವಿಡಿಯೋ ಮಾಡುವುದನ್ನು ಸಹ ನಿರ್ಬಂಧಿಸಬೇಕು ಎಂದು ತುಂಗಭದ್ರಾ ಮಂಡಳಿಯವರಿಗೆ ಹೇಳಿದ್ದಾರೆ.

tweets
Courtesy: @TweetzBallari

ಈ ಹಿನ್ನೆಲೆಯಲ್ಲಿ ಅಣೆಕಟ್ಟೆ ಕೆಳಭಾಗದ ನಡುಗಡ್ಡೆಯಲ್ಲಿ ನಿಂತು ವರದಿ ಮಾಡುತ್ತಿದ್ದ ಮಾಧ್ಯಮದವರನ್ನು ಹೊರಗೆ ಕಳುಹಿಸಲಾಗುತ್ತಿದೆ. ನಡುಗಡ್ಡೆ ಪ್ರದೇಶಕ್ಕೆ ಇತರ ಮಾಧ್ಯಮದವರನ್ನು ತೆರಳದಂತೆ ತಡೆ ಹಿಡಿಯಲಾಗಿದೆ.

Advertisements

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಕೆ ಪ್ರಯತ್ನ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅರಂಭಗೊಂಡಿದೆ. ಕೆಲಸ ಬಹಳ ನಿಧಾನವಾಗಿ ನಡೆಯುತ್ತಿದೆ. ಕ್ರಸ್ಟ್ ಗೇಟ್ ನಂಬರ್ ಹಾಕಿದ ಬೃಹತ್ ಬ್ಯಾಲೆನ್ಸಿಂಗ್ ತೊಲೆಯನ್ನು ಸದ್ಯ ಕಳಚಿ ಇಡಲಾಗಿದೆ.

ಸ್ಕೈವಾಕ್ ತೆಗೆಯಲು ವಿಳಂಬ

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿನ ಮೇಲ್ಭಾಗದಲ್ಲಿ ಇರುವ ಸ್ಕೈವಾಕ್ ಕ್ರೇನ್‌ಗಳ ಚಲನೆಗೆ ಅಡ್ಡಿ ಆಗುತ್ತಿದೆ, ಹೀಗಾಗಿ ಅದನ್ನು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಕೈವಾಕ್ ತೆಗೆಯಲು ಇನ್ನೂ ಎರಡು ಗಂಟೆ ಹಿಡಿಯಬಹುದು, ಬಳಿಕವಷ್ಟೇ ಗೇಟ್ ಅಳವಡಿಸಲಾಗುತ್ತದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X