ರೋಹಿತ್ ವೇಮುಲ ಕಾಯ್ದೆ ಬಲಪಡಿಸಲು ವಿಶ್ವಸಂಸ್ಥೆಯಿಂದ ಭಾರತ ಸರ್ಕಾರಕ್ಕೆ ಪತ್ರ

Date:

Advertisements

ಕರ್ನಾಟಕ ಸರ್ಕಾರ ರೂಪಿಸಿರುವ ರೋಹಿತ್ ವೇಮುಲ ಕಾಯ್ದೆಯನ್ನು ಬಲಪಡಿಸಲು ಒತ್ತಾಯಿಸಿ ವಿಶ್ವಸಂಸ್ಥೆ ಭಾರತ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಯ್ದೆಯ ಕರಡು ದಲಿತರು ಮತ್ತು ಆದಿವಾಸಿಗಳಿಗೆ ನಿರ್ದಿಷ್ಟ ರಕ್ಷಣೆ ಬಗ್ಗೆ ಉಲ್ಲೇಖಿಸಿಲ್ಲ. ಆದ್ದರಿಂದ ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ವಿಶ್ವಸಂಸ್ಥೆಯ ವರ್ಣಭೇದ ನೀತಿ ವಿರೋಧಿ ಘಟಕದ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ.ಪಿ. ಅಶ್ವಿನಿ ಮತ್ತು ಅಲ್ಪಸಂಖ್ಯಾತ ನೀತಿ ಘಟಕದ ಸದಸ್ಯ ನಿಕೋಲಸ್ ಲೆವ್ರತ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಮಾತ್ರವಲ್ಲದೆ ರಾಜ್ಯ ಸರ್ಕಾರದ ಸಂಬಂಧಪಟ್ಟ ಸಚಿವಾಲಯಗಳಿಗೆ ರವಾನಿಸಲಾಗಿದೆ ಎಂದು ಕೆ.ಪಿ. ಅಶ್ವಿನಿ ಮತ್ತು ನಿಕೋಲಸ್ ಲೆವ್ರತ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಸ್ತಾವಿತ ರೋಹಿತ್ ವೇಮುಲ ಮಸೂದೆ ‘ಹಲ್ಲಿಲ್ಲದ ಹುಲಿ’ಯಂತಿದೆಯೇ?

Advertisements

ರೋಹಿತ್ ವೇಮುಲಾ ಕಾಯ್ದೆಯ ಕರಡು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಉಲ್ಲೇಖಿಸಿದೆ. ಆದರೆ ಮಾನಸಿಕ ಆರೋಗ್ಯ, ಶೈಕ್ಷಣಿಕ ಪ್ರಗತಿ, ವಸತಿ, ಕಿರುಕುಳ ಮತ್ತು ಹಿಂಸಾಚಾರ ಮೊದಲಾದವುಗಳ ಉಲ್ಲೇಖಿಸಿಲ್ಲ. ವಿವಿಧ ಕ್ಷೇತ್ರಗಳಲ್ಲಿನ ಅಸಮಾನ ತಾರತಮ್ಯ ನಡೆಯುತ್ತದೆ. ಇದರ ವಿರುದ್ಧ ದಲಿತರು ಮತ್ತು ಆದಿವಾಸಿಗಳಿಗೆ ರಕ್ಷಣೆಯ ಬಗ್ಗೆ ಯಾವುದೇ ಸೂಚನೆಯುಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ದಲಿತರು ಮತ್ತು ಆದಿವಾಸಿಗಳ ವಿರುದ್ಧದ ತಾರತಮ್ಯವನ್ನು ಪರಿಹರಿಸಲು ರೋಹಿತ್ ವೇಮುಲಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ನಾವು ಗೌರವದಿಂದ ಒತ್ತಾಯಿಸುತ್ತೇವೆ. ಹಾಗೆಯೇ ಕರಡು ರಚನೆಯ ಸಮಿತಿಯಲ್ಲಿ ಜಾತಿ, ಲಿಂಗ ಮತ್ತು ಭೌಗೋಳಿಕ ಪ್ರಾತಿನಿಧ್ಯ ಇರಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.

ಜಾತಿ ಆಧಾರಿತ ದ್ವೇಷ ಭಾಷಣ, ತಪ್ಪು ಮಾಹಿತಿ ತಡೆಯಬೇಕು. ತಮ್ಮ ಹಕ್ಕಿನ ಬಗ್ಗೆ ಮಾತನಾಡುವವರ ಮೇಲೆ ಪ್ರತೀಕಾರದ ದಾಳಿ ನಡೆಸಲಾಗುತ್ತಿದೆ. ಆ ದಾಳಿಯ ವಿರುದ್ಧವಾಗಿ ರಕ್ಷಣೆ ನೀಡಬೇಕು ಎಂದು ಒತ್ತಾಯಿಸುವುದಾಗಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಹಾಗೆಯೇ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರೋಹಿತ್ ವೇಮುಲಾ ಕಾಯ್ದೆಯ ಪ್ರಸ್ತುತ ಕರಡಿನೊಳಗೆ ಶಿಕ್ಷೆಯ ವಿಧಾನ ಪರಿಶೀಲಿಸಲು ಕ್ರಮಕೈಗೊಳ್ಳಲಾಗುತ್ತದೆಯೇ? ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು, ವಿದ್ವಾಂಸರು ಮತ್ತು ಕಾರ್ಯಕರ್ತರು ಸೇರಿದಂತೆ ಪ್ರಕರಣದಲ್ಲಿ ತಾರತಮ್ಯಕ್ಕೆ ಒಳಗಾದವರ ಬಳಿ ಯಾವ ರೀತಿಯಲ್ಲಿ ಸಮಾಲೋಚನೆ ನಡೆಸಲಾಗಿದೆ ಮತ್ತು ಮುಂದೆ ಹೇಗೆ ನಡೆಸಲಾಗುತ್ತದೆ? ಕಾನೂನು ಜಾರಿಗೆ ನಿರೀಕ್ಷಿತ ಸಮಯಮಿತಿ ಏನಿದೆ? ಕಾಯ್ದೆ ರಚನಾ ಕರಡು ಸಮಿತಿಯು ಜಾತಿ ಮತ್ತು ಲಿಂಗ ಪ್ರಾತಿನಿಧ್ಯಕ್ಕೆ ಅನುಗುಣವಾಗಿದೆ ಇದೆಯೇ? ಪ್ರತಿನಿಧಿಗಳು ಕರ್ನಾಟಕದವರು ಎಂದು ಖಚಿತಪಡಿಸಿಕೊಳ್ಳಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X