ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ’ ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಡಾ. ಫಾದರ್ ಪೀಟರ್ ಮಚಾದೋ ಹೇಳಿದ್ದಾರೆ.
ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ SIR ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ʼSIR ವಿರೋಧಿ ಬೃಹತ್ ಪ್ರತಿರೋಧ ಸಮಾವೇಶ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇದು ರಾಜಕೀಯ ಸಭೆಯಲ್ಲ, ಸಾರ್ವಜನಿಕರ, ಸಂವಿಧಾನ ಪ್ರೇಮಿಗಳ, ದೇಶ ಪ್ರೇಮಿಗಳ ಸಭೆಯಾಗಿದೆ. SIR ವಿರೋಧಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ನಾವಿಲ್ಲಿ ಸೇರಿದ್ದೇವೆ. ಮತದಾರರ ಪಟ್ಟಿಯ ಪರಿಷ್ಕರಣಗೆ ನಾವು ಸಹಕಾರ ಕೋಡುತ್ತೇವೆ. ಆದರೆ, ಕೆಲವರ ಹೆಸರನ್ನು ತೆಗೆಯುವ, ಕೆಲವರ ಹೆಸರು ಉಳಿಸುವ ದುರುದ್ದೇಶಪೂರಿತ ಎಸ್ಐಆರ್ ಅನ್ನು ಒಪ್ಪುವುದಿಲ್ಲ. ಕರ್ನಾಟಕದ ಒಬ್ಬರೇ ಒಬ್ಬರು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ಒಪ್ಪುವುದಿಲ್ಲ. ಲೋಕಮಾನ್ಯ ತಿಲಕ್ ಅವರು ಸ್ವಾತಂತ್ರ್ಯ ನನ್ನ ಜನ್ಮಸಿದ್ದ ಹಕ್ಕು ಎಂದಿದ್ದರು. ಅದೇ ರೀತಿ ಮತದಾನ ನಮ್ಮ ಜನ್ಮಸಿದ್ದ ಹಕ್ಕು ಎಂದು ನಾವಿವತ್ತು ಹೇಳುತ್ತಿದ್ದೇವೆ. ಅದನ್ನು ಕಿತ್ತುಕೊಳ್ಳುವುದನ್ನು ವಿರೋಧಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಚುನಾವಣಾ ಆಯೋಗಕ್ಕೆ ಪ್ರತಿರೋಧ ಸಮಾವೇಶದ ಆಗ್ರಹಗಳು:
- ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
- ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
- ಚುನಾವಣಾ ಮ್ಯಾನ್ಯೂಯಲ್ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
- ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.
ಇದನ್ನೂ ಓದಿ: ಟ್ವೀಟ್ ಹೇಳಿದ ಮೈತ್ರಿ ಬಿರುಕಿನ ಕಥೆ: ಕಾಂಗ್ರೆಸ್-ಡಿಎಂಕೆ ನಡುವೆ ಹೆಚ್ಚಾಯ್ತಾ ಅಂತರ?
ರಾಜ್ಯ ಸರಕಾರಕ್ಕೆ ಪ್ರತಿರೋಧ ಸಮಾವೇಶದ ಆಗ್ರಹಗಳು:
- ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾವಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
- ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
- ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.




