ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ, ಸತ್ಯ ಸುದ್ದಿಯ ಪ್ರಸಾರ ಮುಂದುವರಿಸುತ್ತೇವೆ: ಡಿಜಿಟಲ್ ಮಾಧ್ಯಮಗಳ ನಿರ್ಣಯ

Date:

Advertisements

ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ನಾವು ಪಾಲಿಸುವುದರ ಜೊತೆಗೆ ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವುದಾಗಿ ಡಿಜಿಟಲ್ ಮಾಧ್ಯಮಗಳ ನಿರ್ಣಯವನ್ನು ತೆಗೆದುಕೊಂಡಿದೆ.

ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಅವರು 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 ಟ್ವೀಟ್‌ಗಳು ಸೇರಿದಂತೆ 8,842 ಲಿಂಕ್‌ಗಳ ಪಟ್ಟಿಯನ್ನು ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಧರ್ಮಸ್ಥಳದಲ್ಲಿ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿದ್ದೆ ಎಂದು ಹೇಳಿಕೊಂಡ ವ್ಯಕ್ತಿ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ಆರೋಪಗಳು ಇಲ್ಲದಿದ್ದರೂ ತಮ್ಮ ಕುಟುಂಬ, ದೇವಾಲಯ ಹಾಗೂ ಸಂಸ್ಥೆಗಳ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್‌ ಆಕ್ಷೇಪಿಸಿದ್ದರು.

Advertisements

ವಾದ ಆಲಿಸಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು, ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಸ್ತುವಿಷಯ ಪ್ರಕಟಿಸದಂತೆ ಇಲ್ಲವೇ ಹಂಚದಂತೆ ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳಿಗೆ ನಿರ್ಬಂಧಿಸಿ ಜುಲೈ 18ರಂದು ಏಕಪಕ್ಷಕೀಯ ಪ್ರತಿಬಂಧಕಾದೇಶವನ್ನು ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈದಿನ ಡಾಟ್ ಕಾಮ್ ಕಚೇರಿಯಲ್ಲಿ ಶುಕ್ರವಾರ ಯೂಟ್ಯೂಬರ್ಸ್‌ ಹಾಗೂ ಡಿಜಿಟಲ್ ಮಾಧ್ಯಮಗಳ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಕೋರ್ಟ್ ಆದೇಶವನ್ನು ಪಾಲಿಸುವ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರೆಸುವ ಹಾಗೂ ಒಂದಾಗಿ ಕಾನೂನು ಹೋರಾಟ ಮಾಡುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಮಹತ್ವದ ನಿರ್ಣಯಗಳ ಜೊತೆಗೆ, ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

meeting

ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ. ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲ ಎನ್ನುವುದನ್ನು ನಾವು ಅರಿತಿದ್ದೇವೆ. ಹೀಗಾಗಿ ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ ಎಂಬ ನಿರ್ಣಯವನ್ನು ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವವರು ತೆಗೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಸಭೆಯಲ್ಲಿ ದ ನ್ಯೂಸ್‌ ಮಿನಿಟ್‌ನ ಪ್ರತಿನಿಧಿಗಳಾದ ಧನ್ಯಾ ರಾಜೇಂದ್ರನ್, ಪೂಜಾ ಪ್ರಸನ್ನ, ಈ ದಿನ ಟಿವಿಯ ಡಾ. ಬಸವರಾಜು ಬಿ.ಸಿ, ಈ ದಿನ.ಕಾಮ್‌ ಸಂಪಾದಕರಾದ ಬಸವರಾಜು ಮೇಗಲಕೇರಿ, ವಾರ್ತಾಭಾರತಿಯ ಆಝಾದ್ ಕಂಡಿಗ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶುರಾಮ್, ನಾನೂ ಗೌರಿ.ಕಾಂ ನ ಗುರುಪ್ರಸಾದ್ ಡಿ ಎನ್, ಪ್ರತಿಧ್ವನಿಯ ಶಿವಕುಮಾರ್, ನ್ಯಾಷನಲ್ ಟಿವಿಯ ಮಂಜು ಬಣಗೆರೆ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಯೂಟ್ಯೂಬರ್ಸ್‌ಗಳಾದ ಕಲಾ ಮಾಧ್ಯಮ ಪರಮೇಶ್ವರ್, ರಾ ಚಿಂತನ್, ಕುಡ್ಲ ರ‍್ಯಾಂಪೇಜ್‌ ಅಜಯ್‌ ಅಂಚನ್, ಪತ್ರಕರ್ತರಾದ ಕನ್ನಡ ಪ್ಲಾನೆಟ್ ದಿನೇಶ್ ಕುಮಾರ್ ದಿನೂ, V4 ನ್ಯೂಸ್‌ನ ಲಕ್ಷ್ಮಣ್ ಕುಂದರ್, ಪೀಪಲ್ ಮೀಡಿಯಾದ ಸುರಭಿ ರೇಣುಕಾಂಬಿಕೆ, ಪ್ರಸ್ತುತ ನ್ಯೂಸ್‌ನ ಬಶೀರ್ ಅಡ್ಯನಡ್ಕ, ಸನ್ಮಾರ್ಗ ನ್ಯೂಸ್‌ನ ಆರ್ ಎ ಲೋಹಾನಿ, ಆಶಾ ಮುಸ್ಸಂಜೆ ಸಮಯ, ಪೊಲೀಸ್ ವಾಣಿ ರಾಘವೇಂದ್ರಚಾರಿ, ದ ಪಾಲಿಟಿಕ್‌ನ ಸಿದ್ದಪ್ಪ ಮೂಲಗೆ, ಜನಶಕ್ತಿ ಮೀಡಿಯಾದ ಗುರುರಾಜ್ ದೇಸಾಯಿ, ತ್ರಿವರ್ಣ ನ್ಯೂಸ್ ಉಮರ್ ಫಾರೂಕ್, ಜಗದೀಶ್ ಕನ್ನಡ ಜಾಣ ಜಾಣೆಯರು, ಕನ್ನಡ ವನ್‌ನ ಭಾಗ್ಯನಾರಾಯಣ ಬೊಗ್ಗವರಪು, ಗೌರಿ ಮೀಡಿಯಾದ ಚಂದ್ರು ತರಹುಣಸೆ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ, ಡಾ. ವಾಸು ಎಚ್‌ ವಿ, ಹೇಮಾ ವೆಂಕಟ್‌ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X