ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

Date:

Advertisements

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸುವಂತೆ ಮನವಿ” ಮಾಡಿದರು.

3 ಜಿಲ್ಲೆಯಲ್ಲಿ ಪರಿಸರ ಗಣಪ

Advertisements

“ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು” ಎಂದು ಅಭಿಪ್ರಾಯಪಟ್ಟರು.

“ಪಿಒಪಿ ಗೌರಿ ಗಣೇಶ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಜೊತೆಗೆ ಅದಕ್ಕೆ ಲೇಪಿಸುವ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ನೀರಲ್ಲಿ ಕರಗಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಪಟ್ಟಣ, ನಗರಗಳಲ್ಲಿ ಸಮುಚ್ಚಯಗಳಿವೆ. ಇವುಗಳಲ್ಲಿ ಸಂಘಗಳು ಇರುತ್ತವೆ. ಅವರಿಗೆ ಮನವಿ ಮಾಡಿ ಮಣ್ಣಿನ ಗಣಪ ಪೂಜಿಸುವಂತೆ ಎಲ್ಲರಿಗೂ ಸಂದೇಶ ಕಳಿಸುವಂತೆ ಮತ್ತು ಶಾಲಾ, ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿ ಪೂಜಿಸುವ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ” ಎಂದರು.

ಹಸಿರು ಪಟಾಕಿಗೆ ಮಾತ್ರ ಅವಕಾಶ

“ಗಣೇಶೋತ್ಸವದ ಮೆರವಣಿಗೆಯಲ್ಲಿ ಪಟಾಕಿಯನ್ನೂ ಹಚ್ಚಲಾಗುತ್ತದೆ. ಸುಪ್ರೀಂಕೋರ್ಟ್ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಸಿಡಿಸದಂತೆ ಮತ್ತು ರಾತ್ರಿ 8ರಿಂದ 10ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಆದೇಶ ನೀಡಿದ್ದು, ಎಲ್ಲರೂ ಈ ನಿಯಮ ಪಾಲಿಸಬೇಕು. ಪರಿಸರಕ್ಕೆ ಮಾರಕವಾದ ಪಟಾಕಿ ಬಳಸದೆ ಹಸಿರು ಪಟಾಕಿ ಸಿಡಿಸಬೇಕು” ಎಂದು ಮನವಿ ಮಾಡಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

“ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ ಮತ್ತು ಸುಟ್ಟರೆ ಗಾಳಿಗೆ ವಿಷಕಾರಕ ಅಂಶ ಸೇರಿಸುವ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನ ನಿಷೇಧಿಸಲಾಗಿದೆ. ಆದರೂ ಹಾದಿ ಬೀದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನೋಡುತ್ತೇವೆ. ಈ ಬಗ್ಗೆ ಜಾಗೃತಿ ಅಗತ್ಯ. ಸ್ಥಳೀಯ ಸಂಸ್ಥೆಗಳು ಹೆಚ್ಚು ಪರಿಣಾಮಕಾರಿಯಾಗಿ ಈ ಸಮಸ್ಯೆ ಪರಿಹರಿಸಬೇಕು. ಇಂದು ಇಡೀ ವಿಶ್ವ ಎದುರಿಸುತ್ತಿರುವ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಆಗಿದೆ. ತಾಪಮಾನ ಏರಿಕೆಯಿಂದ ಒಂದು ತಿಂಗಳಲ್ಲಿ ಬೀಳುವ ಮಳೆ ಒಂದು ವಾರದಲ್ಲಿ, ಒಂದು ವಾರದ ಮಳೆ ಒಂದೇ ದಿನ ಬೀಳುತ್ತಿದ್ದು, ಅತಿವೃಷ್ಟಿಯಿಂದ ಅನಾಹುತ ಸಂಭವಿಸುತ್ತಿದೆ. ಹೀಗಾಗಿ ಇರುವ ಒಂದು ಭೂಮಿಯನ್ನು ರಕ್ಷಿಸುವ ಹೊಣೆ ನಮ್ಮ ನಿಮ್ಮಲ್ಲರ ಮೇಲಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X