ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ವ್ಯವಹಾರದಲ್ಲಿ ಪಾಲುದಾರನಲ್ಲ, ಈ ಬಗ್ಗೆ ತನಿಖೆಯಾಗಲಿ: ಯತ್ನಾಳ್

Date:

Advertisements
  • 55 ವರ್ಷಗಳ ಹಿಂದೆ ನಮ್ಮ ತಂದೆ ಜೊತೆಗೆ ನಾಲ್ಕೈದು ಪಾಲುದಾರರು ಇದ್ದರು
  • ನನ್ನ ವಿರುದ್ಧ ಆರೋಪ ಮಾಡಿದವರ ಮೇಲೆ ಮಾನನಷ್ಠ ಮೊಕದ್ದಮೆ ಹೂಡುವೆ

ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿರುವ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಗೆ ನಾನು ವ್ಯಾವಹಾರಿಕ ಪಾಲುದಾರಿಕೆ ಹೊಂದಿದ್ದೇನೆ ಎಂಬ ಆರೋಪವೇ ಸುಳ್ಳು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, “‌ಮೌಲ್ವಿ ಹಾಶ್ಮಿ ಕುಟುಂಬಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅವನೊಬ್ಬ ಭಯೋತ್ಪಾದಕ. ಅವರ ವ್ಯವಹಾರದಲ್ಲಿ ನಾನು ಪಾಲುದಾರನಲ್ಲ” ಎಂದು ಹೇಳಿದರು.

“50-60 ವರ್ಷದ ಹಿಂದಿನ ಲೀಸ್ ಜಮೀನು ಅದು. ಮುನಿಸಿಪಲ್ ಆಸ್ತಿ, ನನ್ನ ಆಸ್ತಿ ಅಲ್ಲ. ಅದರ ಮೂಲ ಮಾಲೀಕ ನಮ್ಮ ತಂದೆ. 55 ವರ್ಷಗಳ ಹಿಂದೆ ನಮ್ಮ ತಂದೆ ಜೊತೆಗೆ ನಾಲ್ಕೈದು ಪಾಲುದಾರರು ಇದ್ದರು.‌ ಅದರಲ್ಲಿ ಇಬ್ಬರು ಮುಸ್ಲಿಂ ಹಾಗೂ ಇಬ್ಬರು ಹಿಂದುಗಳಿದ್ದರು” ಎಂದರು.

Advertisements

“ಇವೆಲ್ಲದರ ಬಗ್ಗೆ ತನಿಖೆ ಆಗಲಿ. ನಾನು ಮೌಲ್ವಿ ಹಾಶ್ಮಿ ಜೊತೆಗೆ ವ್ಯಾವಹಾರಿಕ ಪಾಲುದಾರಿಕೆ ಹೊಂದಿದ್ದೇನೆ ಎನ್ನುವವರ ವಿರುದ್ದ ಮಾನನಷ್ಠ ಮೊಕದ್ದಮೆ ಹೂಡುತ್ತೇನೆ” ಎಂದು ಎಚ್ಚರಿಸಿದರು.

”ಪೊಲೀಸ್ ಇಲಾಖೆಯವರು ಮೌಲ್ವಿ ವಿರುದ್ಧ ಗಂಭೀರ ಆರೋಪವಿದೆ, ಅವರ ಮನೆಗೆ ಹೋಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಿದ್ದರೂ, ಮುಸ್ಲಿಮರ ಮತಕ್ಕಾಗಿ ಸಿದ್ದರಾಮಯ್ಯ ಅವರ ಮನೆಗೆ ಹೋಗಿದ್ದಾರೆ. ಸಚಿವ ಎಂಬಿ ಪಾಟೀಲ್ ಅವರು ಒತ್ತಡ ಹಾಕಿ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಹೋಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಐಸಿಸ್‌ ನಂಟಿನ ಕತೆ | ಯತ್ನಾಳ್‌ – ತನ್ವೀರ್ ಹಾಶ್ಮಿ ಒಂದೇ ಉದ್ಯಮದ ಪಾಲುದಾರರು

ಯತ್ನಾಳ್ ಮೇಲೆ ಆರೋಪ

ಬಸನಗೌಡ ಪಾಟೀಲ ಯತ್ನಾಳ್ ಮತ್ತು ಜಮಾತ್‌ ಎ ಅಹಲೆ ಸುನ್ನತ್‌ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್‌ ಹಾಶ್ಮಿ, ಗಾಂಧಿ ಚೌಕದ ಬಳಿಯಿರುವ ‘ಟೂರಿಸ್ಟ್‌ ಹೋಟೆಲ್‌’ನ ಪಾಲುದಾರರು ಎಂಬ ಮಾಹಿತಿ ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ, ವಿಜಯಪುರ–ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಯತ್ನಾಳ್ ಹಾಗೂ ಮೌಲ್ವಿ ಹಾಶ್ಮಿ ಮನೆಗಳು‌ ಮತ್ತು ವಾಣಿಜ್ಯ ಮಳಿಗೆಗಳು ಅಕ್ಕಪಕ್ಕದಲ್ಲಿವೆ. ಇಬ್ಬರಲ್ಲಿ ವೈಮನಸ್ಸು ದಿಢೀರ್ ಮೂಡಲು ಕಾರಣ ಏನು ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X