ಇಳುವರಿ ಕುಸಿತ: ಕಾಳು ಮೆಣಸು ಬೆಲೆ ಭಾರೀ ಏರಿಕೆ!

Date:

Advertisements

ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ಬಿಸಿಲು, ರೋಗಬಾಧೆ ಕಾರಣದಿಂದಾಗಿ ಕಾಳು ಮೆಣಸಿನ ಇಳುವರಿ ಕಡಿಮೆಯಾಗುತ್ತಿದೆ. ಇಳುವರಿ ಕಡಿಮೆಯಾದಂತೆ ಬೆಲೆ ಏರಿಕೆಯಾಗುತ್ತಿದೆ. ಇದೀಗ, ಕಾಳು ಮೆಣಸು ದರವು ಒಂದು ಕೆ.ಜಿ.ಗೆ 1,000 ರೂ. ಗಡಿ ದಾಟುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಕಾಳು ಮೆಣಸು ದರವು ಕಳೆದ ಎರಡು ವರ್ಷಗಳಲ್ಲಿ ಸುಮಾರು 40%ರಷ್ಟು ಏರಿಕೆಯಾಗಿದೆ. ಎರಡು ವರ್ಷಗಳ ಹಿಂದೆ, ಕಾಳು ಮೆಣಸು ಬೆಲೆ ಕೆ.ಜಿ.ಗೆ 400 ರೂ. ಇತ್ತು. ಈ ವರ್ಷದ ಆರಂಭದಲ್ಲಿ 700 ರೂ.ಗೆ ಏರಿಕೆಯಾಗಿತ್ತು. ಇದೀಗ, ಮತ್ತೆ ಬೆಲೆ ಏರಿಕೆಯಾಗಲಿದ್ದು, 900 ರಿಂದ 1,100 ರೂ.ವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

“ಕಾಳು ಮೆಣಸನ್ನು ಹೇರಳವಾಗಿ ಬೆಳೆಯುವ ವಿಯೆಟ್ನಾಂ ಮತ್ತು ಬ್ರೆಜಿಲ್‌ನಲ್ಲಿಯೂ ಇಳುವರಿ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಕಾಳು ಮೆಣಸು ಬೆಳೆಯುವ ಕೊಡಗು, ಜಿಕ್ಕಮಗಳೂರು ಜಿಲ್ಲೆಯಲ್ಲಿ ಇಳಿವರಿ ಕುಸಿದಿದೆ. ಜೊತೆಗೆ, ಸೋಂಕು, ರೋಗಗಳಿಂದ ಕಾಳು ಮೆಣಸಿನ ಬಳ್ಳಿಗಳು ನಾಶವಾಗುತ್ತಿವೆ. ಹೀಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಬಿಕ್ಕಟ್ಟು ಎದುರಾಗಿದೆ. ಬೇಡಿಕೆಯ ಒತ್ತಡ ಜಾಸ್ತಿಯಾಗಿದೆ. ಆದರೆ, ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ಕರ್ನಾಟಕದಲ್ಲಿ ಕಾಳು ಮೆಣಸು ಬೆಲೆಯು 1,000 ರೂ. ಗಡಿ ದಾಟುವ ಸಾಧ್ಯತೆಗಳಿವೆ” ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ ಹೇಳಿವೆ.

Advertisements

ಬೇಸಿಗೆ ಬಿಸಿಲಿನಿಂದಾಗಿ ಕಾಳು ಮೆಣಸು ಬಳ್ಳಿಗಳು ಹೂವು ಬಿಡುವುದು ವಿಳಂಬವಾಯಿತು. ಹೂವು ಬಿಡುವ ವೇಳೆಗೆ ಅಕಾಲಿಕ ಮಳೆ ಸುರಿಯಿತು. ಮಳೆಯಿಂದಾಗಿ ಹೂವುಗಳೆಲ್ಲವೂ ಉದುರಿಹೋಗಿವೆ. ಇದು, ಕಾಳು ಮೆಣಸು ಉತ್ಪಾದನೆ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಕರ್ನಾಟಕ ಸ್ಪೈಸ್ ಅಸೋಸಿಯೇಷನ್​ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X