ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

Date:

Advertisements

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ ಕಾರ್ಯಕ್ರಮದ ಪರಂಪರೆಯನ್ನು ಮುಂದುವರೆಸುವ ಸಲುವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಬಿಳ್ಳುರು ಹಾಗು ರಾಶ್ಚೆರುವು ಗ್ರಾಪಂ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮಗಳ ಪೂರ್ವಬಾವಿಯಾಗಿ ಚರ್ಚಿಸಲು ಏರ್ಪಡಿಸಿದ್ದ ಬಾಗೇಪಲ್ಲಿ ಹಾಗು ಚೇಳೂರು ತಾಲ್ಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜನಸ್ಪಂಧನ ಕಾರ್ಯಕ್ರಮಗಳು ಹೆಚ್ಚು ಜನರು ಸೇರುವ ಜಾತ್ರೆಗಳಂತೆ ಇರಬಾರದು. ಇಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಸ್ಥಳವಾಗಬೇಕು. ಈ ಹಿಂದಿನ ಎಲ್ಲಾ ಜನಸ್ಪಂಧನ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಹೋಗುತ್ತಿರುವುದರಿಂದ ಜನಸ್ಪಂಧನ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವಬಂದಿದೆ. ಈಗ ಬಿಳ್ಳೂರು ಮತ್ತು ರಾಶ್ಚೆರುವು ಗ್ರಾಪಂಗಳ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮಗಳಲ್ಲಿ ವಿವಿದ ಇಲಾಖೆಗಳಿಂದ ಕನಿಷ್ಠ 2 ಸಾವಿರ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡಬೇಕಾಗಿದೆ. ನಿಮ್ಮ ಜೊತೆಯಲ್ಲಿ ನನ್ನ ಆಪ್ತ ಸಿಬ್ಬಂದಿಯೂ ಬರುತ್ತಿದ್ದು ಪ್ರತಿ ಮನೆಗೂ ಬೇಟಿ ನೀಡಿ ಜನಸಾಮಾನ್ಯರಿಗೆ ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡು ಅವುಗಳನ್ನು ಜನಸ್ಪಂಧನ ಕಾರ್ಯಕ್ರಮದಲ್ಲಿ ವಿತರಿಸಲು ಪ್ರಮಾಣಿಕ ಪ್ರಯತ್ನವನ್ನು ಮಾಡಬೇಕಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಅನೇಕರು ಸರ್ಕಾರಿ ಕಚೇರಿಗಳನ್ನು ನೋಡದಂತಹವರು ಇದ್ದಾರೆ, ಅಧಿಕಾರಿಗಳ ನಿರ್ಲಕ್ಷದಿಂದ ಕೆಲವರು ಅನಗತ್ಯವಾಗಿ ಅಲೆದಾಟವನ್ನು ಮಾಡುತ್ತಿರುತ್ತಾರೆ. ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನರ ಅಲೆದಾಟ ತಪ್ಪಬೇಕು,ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದು ಸುಲಭವಾಗಿ ಅರ್ಹರಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ನಾವೆಲ್ಲರೂ ಶ್ರಮಿಸಬೇಕು ಇದರ ನಂತರ ಮಿಟ್ಟೇಮರಿ ಮತ್ತು ಕಾನಗಮಾಕಲಪಲ್ಲಿ ಗ್ರಾಪಂ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮ ನಡೆಯಲಿದೆ ಎಂದರು.

ಇದನ್ನು ಓದಿದ್ದೀರಾ..? ನೀರಿಗಾಗಿ ನಡೆಯುತ್ತಿರುವ ಧರ್ಮ ಯುದ್ಧವಿದು. ನಾವು ಪಾಂಡವರ ಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ.

ಸಭೆಯಲ್ಲಿ ಬಾಗೇಪಲ್ಲಿ ತಹಶೀಲ್ದಾರ್ ಮನೀಷ್ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ. ಶ್ವೇತ, ತಾಪಂ ಇಓ ಜಿ.ವಿ.ರಮೇಶ್, ಬಿಇಓ ಎನ್.ವೆಂಕಟೇಶಪ್ಪ, ಬಿಸಿಎಂ ಅಧಿಕಾರಿ ಆರ್.ಶಿವಪ್ಪ, ಸಿಡಿಪಿಓ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಪ್ರೀತಂ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಮೆಹಬೂಬ್ ಬಾಷ,ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

ರಾಜ್ಯದಲ್ಲಿ ಬೆಳೆ ಹಾನಿ | ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು...

Download Eedina App Android / iOS

X