ಧಾರವಾಡ | ಕೌಟುಂಬಿಕ ಕಲಹ; ಮಕ್ಕಳಿಗೆ ವಿಷವುಣಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Date:

Advertisements

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ‌ ನಡೆದಿದೆ.

ಮಾಲಂಬಿ ಎಂಬುವರು ತನ್ನ 8 ಹಾಗೂ 6 ವರ್ಷದ ಇಬ್ಬರು ಮಕ್ಕಳಿಗೆ ವಿಷವುಣಿಸಿದ್ದಾರೆ. ನಂತರ ತಾನೂ ವಿಷ ಸೇವಿಸಿದ್ದಾರೆ. ಬಳಿಕ ಅಸ್ವಸ್ಥರಾಗಿದ್ದರಿಂದ ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮದ ನಿವಾಸಿಯಾಗಿರುವ ಮಹಿಳೆ ಗಂಗಾವತಿಯ ಆಜಿಜ್ ಜತೆಗೆ ಮದುವೆಯಾಗಿದ್ದರು. ನಂತರ ಇಬ್ಬರ ನಡುವೆ ಮನಸ್ತಾಪವುಂಟಾಗಿತ್ತು. ಇದಾದ ಬಳಿಕ ಆಜಿಜ್ ಬಾಷಾ ಮಾಲಂಬಿಯನ್ನು ಬಿಟ್ಟು ಹೋಗಿದ್ದ. ಅಲ್ಲದೆ, ಪತಿಯ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತೆಂಬ ಆರೋಪವೂ ಕೇಳಿಬಂದಿದೆ.

Advertisements

“ಕಿರುಕುಳದಿಂದ ಮನನೊಂದ ಮಾಲಂಬಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮಾಲಂಬಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ತೀವ್ರ ನಿಗಾ ಘಟಕ(ICU)ದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರವಾದಿ ಮಹಮ್ಮದ್ ಕುರಿತು ಅವಹೇಳನ; ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ SDPI ಆಗ್ರಹ

“ಶುಕ್ರವಾರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದ ತಾಯಿ-ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ನಮ್ಮ ಸಿಬ್ಬಂದಿ ಚಿಕಿತ್ಸೆ ಮುಂದುವರೆಸಿದ್ದಾರೆ. ಇದೀಗ ತಾಯಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ ಇಬ್ಬರು‌ ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತೀವ್ರ ನಿಗಾಘಟಕದಲ್ಲಿ‌ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ” ಎಂದು ಕೆಎಂಸಿಆರ್​​ಐ ನಿರ್ದೇಶಕ ಡಾ. ಎಸ್ ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X