ಮೈಸೂರು | ದಸರಾ ನಿಮಿತ್ತ 395 ಹೆಚ್ಚುವರಿ ಪೌರಕಾರ್ಮಿಕರ ನೇಮಕ: ಎಂಸಿಸಿ

Date:

ದಸರಾ ನಿಮಿತ್ತ ನಗರದಲ್ಲಿ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು 395 ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮುಂದಾಗಿದೆ.

- Advertisement -

ದಸರಾ ಕಾರ್ಯಕ್ರಮ ನಡೆಯುವ ರಸ್ತೆಗಳು, ಪ್ರವಾಸಿ ತಾಣಗಳು ಹಾಗೂ ಇತರ ಸ್ಥಳಗಳನ್ನು ಸ್ವಚ್ಚವಾಗಿಡಲು ಮತ್ತು ಅಚ್ಚುಕಟ್ಟಾಗಿಡಲು ಯಂತ್ರೋಪಕರಣ ಮತ್ತು ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೈಸೂರು ನಗರದಲ್ಲಿ ದಿನವೊಂದಕ್ಕೆ ಸರಾಸರಿ 150 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಮತ್ತು 10 ಟನ್‌ ತ್ಯಾಜ್ಯ ಸೇರಿ 500 ಟನ್ ಘನತ್ಯಾಜ್ಯ ಸಂಗ್ರಹವಾಗುತ್ತದೆ. ಪ್ರವಾಸಿತಾಣಗಳು, ದಸರಾ ನಡೆಯುವ ಸ್ಥಳ, ಮುಖ್ಯವಾಗಿ ಆಹಾರ ಮೇಳದ ಸ್ಥಳ ಮತ್ತು ಅರಮನೆ ಸುತ್ತಮುತ್ತಲಿನ ಪ್ರದೇಶದ ಸ್ವಚ್ಚತೆ ಒಂದು ಸವಾಲಿನ ಕೆಲಸವಾಗಿದೆ.

ಅಲ್ಲದೆ, ದಸರಾ ನಡೆಯುವ ಅಕ್ಟೋಬರ್‌ 15ರಿಂದ ಅಕ್ಟೋಬರ್‌ 24ರವರೆಗೆ ಲಕ್ಷಾಂತರ ಜನ ಪ್ರವಾಸಿಗರು ನಗರಕ್ಕೆ ಭೇಟಿ ನೀಡುವುವುದರಿಂದ ಇನ್ನೂ ಹೆಚ್ಚಿನ ಕಸ ಸಂಗ್ರಹವಾಗುತ್ತದೆ. ಹೀಗಾಗಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ನಗರವನ್ನು ಸ್ವಚ್ಚವಾಗಿಡಲು ಎಂಸಿಸಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ 2,100 ಪೌರಕಾರ್ಮಿಕರು ಎಂಸಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಎಂಸಿಸಿ ಇನ್ನೂ 395 ಪೌರಕಾರ್ಮಿಕರನ್ನು ನೇಮಿಸಿಕೊಂಡು, ಜನ ಸಂದಣಿ ಇರುವ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ. ಯುವದಸರಾ, ವಸ್ತುಪ್ರದರ್ಶನ ಮೈದಾನ, ಚಾಮುಂಡಿ ಬೆಟ್ಟ ಹಾಗೂ ಮೃಗಾಲಯದ ಸ್ಥಳಗಳಲ್ಲಿ ಈ ಪೌರಕಾರ್ಮಿಕರನ್ನು ಸೇವೆಗೆ ನೇಮಿಸಲಿದೆ. ಈ ಪೌರ ಕಾರ್ಮಿಕರು ಶಿಫ್ಟ್‌ ಆಧಾರದ ಮೇಲೆ ಕೆಲಸ ಮಾಡಲಿದ್ದಾರೆ. ಅಲ್ಲದೆ, ಈ ವರ್ಷದ ಹತ್ತು ದಿನಗಳಿಗೆ ನಾಲ್ಕು ವಿಭಿನ್ನ ಪ್ಯಾಕೇಜ್‌ಗಳಲ್ಲಿ ಈ ಪೌರಕಾರ್ಮಿಕರನ್ನು ನಿಯೋಜಿಸಲು ಯೋಜನೆ ರೂಪಿಸಲಾಗಿದೆ. ನಿಯಮಿತ ಪೌರಕಾರ್ಮಿಕರು ತಮ್ಮ ವ್ಯಾಪ್ತಿಯ ಎಲ್ಲ 65 ವಾರ್ಡ್‌ಗಳನ್ನು ಸ್ವಚ್ಛವಾಗಿಡಲು ಶ್ರಮಿಸಲಿದ್ದಾರೆ ಎಂದು ಪಾಲಿಕೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...