ಮೈಸೂರು | ದಸರಾ ನಿಮಿತ್ತ 395 ಹೆಚ್ಚುವರಿ ಪೌರಕಾರ್ಮಿಕರ ನೇಮಕ: ಎಂಸಿಸಿ

Date:

Advertisements

ದಸರಾ ನಿಮಿತ್ತ ನಗರದಲ್ಲಿ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು 395 ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮುಂದಾಗಿದೆ.

ದಸರಾ ಕಾರ್ಯಕ್ರಮ ನಡೆಯುವ ರಸ್ತೆಗಳು, ಪ್ರವಾಸಿ ತಾಣಗಳು ಹಾಗೂ ಇತರ ಸ್ಥಳಗಳನ್ನು ಸ್ವಚ್ಚವಾಗಿಡಲು ಮತ್ತು ಅಚ್ಚುಕಟ್ಟಾಗಿಡಲು ಯಂತ್ರೋಪಕರಣ ಮತ್ತು ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಲಾಗುತ್ತಿದೆ.

ಮೈಸೂರು ನಗರದಲ್ಲಿ ದಿನವೊಂದಕ್ಕೆ ಸರಾಸರಿ 150 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಮತ್ತು 10 ಟನ್‌ ತ್ಯಾಜ್ಯ ಸೇರಿ 500 ಟನ್ ಘನತ್ಯಾಜ್ಯ ಸಂಗ್ರಹವಾಗುತ್ತದೆ. ಪ್ರವಾಸಿತಾಣಗಳು, ದಸರಾ ನಡೆಯುವ ಸ್ಥಳ, ಮುಖ್ಯವಾಗಿ ಆಹಾರ ಮೇಳದ ಸ್ಥಳ ಮತ್ತು ಅರಮನೆ ಸುತ್ತಮುತ್ತಲಿನ ಪ್ರದೇಶದ ಸ್ವಚ್ಚತೆ ಒಂದು ಸವಾಲಿನ ಕೆಲಸವಾಗಿದೆ.

Advertisements

ಅಲ್ಲದೆ, ದಸರಾ ನಡೆಯುವ ಅಕ್ಟೋಬರ್‌ 15ರಿಂದ ಅಕ್ಟೋಬರ್‌ 24ರವರೆಗೆ ಲಕ್ಷಾಂತರ ಜನ ಪ್ರವಾಸಿಗರು ನಗರಕ್ಕೆ ಭೇಟಿ ನೀಡುವುವುದರಿಂದ ಇನ್ನೂ ಹೆಚ್ಚಿನ ಕಸ ಸಂಗ್ರಹವಾಗುತ್ತದೆ. ಹೀಗಾಗಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ನಗರವನ್ನು ಸ್ವಚ್ಚವಾಗಿಡಲು ಎಂಸಿಸಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ 2,100 ಪೌರಕಾರ್ಮಿಕರು ಎಂಸಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಎಂಸಿಸಿ ಇನ್ನೂ 395 ಪೌರಕಾರ್ಮಿಕರನ್ನು ನೇಮಿಸಿಕೊಂಡು, ಜನ ಸಂದಣಿ ಇರುವ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ. ಯುವದಸರಾ, ವಸ್ತುಪ್ರದರ್ಶನ ಮೈದಾನ, ಚಾಮುಂಡಿ ಬೆಟ್ಟ ಹಾಗೂ ಮೃಗಾಲಯದ ಸ್ಥಳಗಳಲ್ಲಿ ಈ ಪೌರಕಾರ್ಮಿಕರನ್ನು ಸೇವೆಗೆ ನೇಮಿಸಲಿದೆ. ಈ ಪೌರ ಕಾರ್ಮಿಕರು ಶಿಫ್ಟ್‌ ಆಧಾರದ ಮೇಲೆ ಕೆಲಸ ಮಾಡಲಿದ್ದಾರೆ. ಅಲ್ಲದೆ, ಈ ವರ್ಷದ ಹತ್ತು ದಿನಗಳಿಗೆ ನಾಲ್ಕು ವಿಭಿನ್ನ ಪ್ಯಾಕೇಜ್‌ಗಳಲ್ಲಿ ಈ ಪೌರಕಾರ್ಮಿಕರನ್ನು ನಿಯೋಜಿಸಲು ಯೋಜನೆ ರೂಪಿಸಲಾಗಿದೆ. ನಿಯಮಿತ ಪೌರಕಾರ್ಮಿಕರು ತಮ್ಮ ವ್ಯಾಪ್ತಿಯ ಎಲ್ಲ 65 ವಾರ್ಡ್‌ಗಳನ್ನು ಸ್ವಚ್ಛವಾಗಿಡಲು ಶ್ರಮಿಸಲಿದ್ದಾರೆ ಎಂದು ಪಾಲಿಕೆ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X