ರಸ್ತೆ ಬದಿಯಲ್ಲೇ ಆಸ್ಪತ್ರೆ ತ್ಯಾಜ್ಯ ಸುರಿದ ಹಿನ್ನೆಲೆ ಸ್ಥಳೀಯರು ಆಕ್ರೋಶ

Date:

Advertisements

ಬಾಗೇಪಲ್ಲಿ:-ಆಸ್ಪತ್ರೆ ತ್ಯಾಜ್ಯ ವಿಲೇವಾರಿಗೆ ಸರಕಾರದ ಕಟ್ಟುನಿಟ್ಟಿನ ಆದೇಶವಿದ್ದರೂ ಪಟ್ಟಣದ ಕೆಲ ಆಸ್ಪತ್ರೆಗಳು ಬೇಕಾಬಿಟ್ಟಿಯಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಕಂಡುಬಂದಿದೆ.ಆಸ್ಪತ್ರೆಗಳಲ್ಲಿ ಬಳಸಿ ಸಿರೆಂಜ್, ಗಾಯಗಳಿಗೆ ಸುತ್ತಿದ್ದ ರಕ್ತದ ಬಟ್ಟೆ, ನಿರುಪಯುಕ್ತ ಔಷಧ ಬಾಟಲಿಗಳು ಸೇರಿದಂತೆ ಹಲವು ತ್ಯಾಜ್ಯಗಳನ್ನು ಸಾರ್ವಜನಿಕರು ಓಡಾಡುವ ರಸ್ತೆ ಬದಿಯಲ್ಲಿ ಕಾನೂನು ಬಾಹಿರವಾಗಿ ಎಸೆಯಲಾಗಿದೆ.

ತಾಲೂಕಿನ ಚಿನ್ನೇಪಲ್ಲಿ ಕ್ರಾಸ್ ಸಮೀಪ ರಸ್ತೆ ಬದಿಯಲ್ಲೇ ಪ್ಲಾಸ್ಟಿಕ್ ಕವರ್ ಗಳಲ್ಲಿ ಗಂಟು ಕಟ್ಟಿಕೊಂಡು ಬಂದು,ಎಸೆಯಲಾಗಿದೆ. ಇದರಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದು,ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸ್ ಪ್ರತಿಕ್ರಿಯೆ ನೀಡಿನಾನು ನಿತ್ಯವೂ ನಮ್ಮ ಫೌಲ್ಟ್ರೀ ಫಾರ್ಮ್ ಕಡೆ ಇದೇ ರಸ್ತೆಯಲ್ಲಿ ಸಂಚರಿಸುತ್ತಿರುತ್ತೇನೆ. ಎಂದೂ ಈ ರೀತಿ ಆಸ್ಪತ್ರೆ ತ್ಯಾಜ್ಯ ಕಂಡಿರಲಿಲ್ಲ.ಹಾಗಾಗಿ ಇದನ್ನು ಯಾರು ಎಸೆದಿದ್ದಾರೆ ಖಾಸಗಿ ಆಸ್ಪತ್ರೆಯವರಾ ಅಥವಾ ನಕಲಿ ಕ್ಲಿನಿಕ್ ಗಳಿಂದ ತಂದಂತಹ ತ್ಯಾಜ್ಯವೆಂದು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕಿದೆ ಎಂದರು.

ಇದನ್ನು ಓದಿದ್ದೀರಾ..? ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಾಮಾನ್ಯ ಸಭೆ, ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಆಸ್ಪತ್ರೆಯ ತ್ಯಾಜ್ಯವನ್ನು ಎಲ್ಲಂದರಲ್ಲೆ ಸುರಿಯಬಾರದು,ಎಸೆಯಬಾರದು. ಅವುಗಳನ್ನು ನಿರ್ವಹಣೆ ಮಾಡಲೇ ತರಭೇತಿಗೊಳಿಸಿರುತ್ತಾರೆ.ನಿಯಮಗಳನುಸಾರವಾಗಿ ತ್ಯಾಜ್ಯ ನಿರ್ವಹಣೆ ಮಾಡೇಕಾಗಿರುತ್ತದೆ. ಆದರೆ ಇಂಥಹ ತ್ಯಾಜ್ಯವನ್ನು ನಿರ್ಲಕ್ಷ್ಯದಿಂದ ಎಸೆದಿರುವುದು ಪ್ರಜ್ಞಾವಂತರಲ್ಲಿ ಬೇಸರ ಮೂಡಿಸಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕೃತ್ಯ ಎಸೆಗಿರುವವರನ್ನು ಪತ್ತೆ ಮಾಡಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X