ಶ್ರೀನಿವಾಸಸಾಗರದಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಶುಭ ಕೋರಿದ ಶ್ರೀಮಂಗಳನಾಥಸ್ವಾಮೀಜಿ

Date:

Advertisements

ಚಿಕ್ಕಬಳ್ಳಾಪುರ: ಪುರಾಣ ಪ್ರಸಿದ್ಧ ಪ್ರವಾಸಿ ತಾಣವಾದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ನೆಲೆಸಿರುವ ಶ್ರೀನಿವಾಸ ಸಾಗರದಲ್ಲಿ ಗುರುವಾರ ತ್ರಿಪುರಿ ಸಾಲ್ವೆಂಟ್ಸ್ ಸಂಸ್ಥೆ ನೂತನವಾಗಿ ಪ್ರಾರಂಭಿಸಿರುವ ದೋಣಿವಿಹಾರಕ್ಕೆ ಚಾಲನೆ ನೀಡಿದ ಆದಿಚುಂಚನಗಿರಿ ಶಾಖಾಮಠದ ಮಂಗಳನಾಥಸ್ವಾಮೀಜಿ ದೋಣಿಯಲ್ಲಿ ಕುಳಿತು ವಿಹಾರ ಮಾಡುವ ಮೂಲಕ ಉದ್ಘಾಟಿಸಿದರು.

ತಾಲೂಕಿನ ಪೋಶೆಟ್ಟಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಶ್ರೀನಿವಾಸ ಸಾಗರದ ಯಾತ್ರಿನಿವಾಸದ ಬಳಿ ತ್ರಿಪುರಿ ವಾಟರ್ ಸ್ಪೋರ್ಟ್ಸ್ ಅಂಡ್ ಅಡ್ವೆಂರ‍್ಸ್ ಸಂಸ್ಥೆಯಿoದ ಗುರುವಾರ ಆಯೋಜಿಸಿದ್ದ ದೋಣಿವಿಹಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಜಲಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತ್ರಿಪುರಿ ಸಾಲ್ವೆಂಟ್ಸ್ ಸಂಸ್ಥೆಯ ಸಂಸ್ಥಾಪಕ ಭೂಷಣ್ ಎಂಬ ಯುವಕ ದೋಣಿವಿಹಾರ ಎಂಬ ಸಾಹಸಕ್ಕೆ ಕೈಹಾಕಿದ್ದಾರೆ.ಈ ಕ್ಷೇತ್ರದಲ್ಲಿ ಸರಿಯಾದ ರೀತಿಯಲ್ಲಿ ಬೆಳವಣಿಗೆ ಕಾಣುವ ಮೂಲಕ ಜನಪ್ರೀತಿಗೆ ಪಾತ್ರವಾಗಲಿ.ಅವರ ಸಂಕಲ್ಪ ಕೈಗೂಡಲಿ ಎಂದು ಭೈರವೇಶ್ವರನ ಆಶೀರ್ವಾದ ಈ ಸಂಸ್ಥೆಯ ಮೇಲಿರಲಿ ಎಂದು ಶುಭಕೋರಿದರು.
ಈ ಬಗ್ಗೆ ಮಾತನಾಡಿರುವ ತ್ರಿಪುರಿ ಸಾಲ್ವೆಂಟ್ಸ್ ಸಂಸ್ಥಾಪಕ ಭೂಷಣ್ ಮಾತನಾಡಿ ಶ್ರೀನಿವಾಸ ಸಾಗರದಲ್ಲಿ ಸಾರ್ವಜನಿಕರಿಗಾಗಿ ಬೋಟಿಂಗ್ ಸೌಲಭ್ಯ ಆರಂಭಿಸಲು ಸಹಾಯ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್,ಭರಣಿ ವೆಂಕಟೇಶ್ ಅವರನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದ ಅವರು ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ದೋಣಿವಿಹಾರ ಮಾಡಲು ಬರುವವರಿಗಾಗಿ ಲೈಫ್‌ಜಾಕೆಟ್‌ಗಳನ್ನು ಒದಗಿಸುವ ಜೊತೆಗೆ ದೋಣಿವಿಹಾರದ ಪ್ರಯಾಣಿಕರಿಗೆ ಜೀವವಿಮೆಯನ್ನು ಕೂಡ ಒದಗಿಸಲಾಗಿದೆ.ಪ್ರಯಾಣಿಕರು ಸಂಚರಿಸುವ ಮಾರ್ಗಗಳಲ್ಲೆಲ್ಲಾ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ.ಮದ್ಯಪಾನ ಮಾಡಿ ಬರುವವರಿಗೆ ಬೋಟಿಂಗ್ ಪ್ರವೇಶ ಇರುವುದಿಲ್ಲ.ಒಟ್ಟಾರೆ ದೋಣಿವಿಹಾರ ಮಾಡುವವರ ರಕ್ಷನೆಯ ದೃಷ್ಟಿಯಿಂದ ಸರಕಾರದ ನಿಯಮಾನುಸಾರ ಬೇಕಾದ ಕ್ರಮಗಳನ್ನು ನಮ್ಮ ಸಂಸ್ಥೆ ತೆಗೆದುಕೊಂಡಿ ಎಂದರು.

ಶ್ರೀನಿವಾಸಸಾಗರದಲ್ಲಿ ಸದ್ಯ ಸಾರ್ವಜನಿಕರ ಬಳಕೆಗೆ ಎರಡು ದೋಣಿಗಳ ಸೇವೆಯನ್ನು ಒದಗಿಸಲಾಗಿದೆ.ಬೇಡಿಕೆ ಮತ್ತು ಜನರ ಆಸಕ್ತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಪೆಡಲ್ ಹಾಗೂ ಮ್ಯಾನ್ಯುಯೆಲ್ ಬೋಟ್ಗಳನ್ನು ಹಾಕಲು ತೀರ್ಮಾನಿಸಲಾಗುವುದು.ದೋಣಿ ನಡೆಸುವ ಸಿಬ್ಬಂದಿಯು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವಾಟರ್ ಸ್ಪೋರ್ಟ್ಸ್ ಅಡ್ವೆಂರ‍್ಸ್ ಸಂಸ್ಥೆಯಿoದ ತರಬೇತಿ ಪಡೆದವರಾಗಿದ್ದಾರೆ.ಮಂಗಳೂರು ಉಡುಪಿ ಗೋವಾ ಮತ್ತಿತರ ಸಮುದ್ರ ತೀರಗಳಿಗೆ ಹೋಗಿ ದೋಣಿ ಪ್ರಯಾಣದ ಅನುಭವ ಪಡೆಯುವ ಕನಸು ಕಾಣುತ್ತಿರುವ ಗ್ರಾಮೀಣ ಪ್ರದೇಶದ ಮಂದಿ ಇಲ್ಲಿಗೆ ಬಂದು ಕಡಿಮೆ ದರದಲ್ಲಿ ಬೆಟ್ಟಗುಡ್ಡಗಳ ಪರಿಸರದ ನಡುವೆ ಅನುಭವ ಪಡೆಯುವಂತೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ..?ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ

ದೋಣಿ ವಿಹಾರಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಅವರ ಮೊಮ್ಮಗ ಸತೀಶ್ ಮೋಕ್ಷಗುಂಡಮ್, ಕೆ.ವಿ.ನವೀನ್‌ಕಿರಣ್, ಕೆ.ಎಂ.ಮುನೇಗೌಡ,ಉದ್ಯಮಿ ಮಹೇಶ್,ಯುವ ಮುಖಂಡ ಅಲ್ಲು ಅನಿಲ್, ಬಾಲಕುಂಟಹಳ್ಳಿ ಗಂಗಾಧರ್, ಪಿಳ್ಳಾಂಜಿನಪ್ಪ, ಚೀಗಟೇನಹಳ್ಳಿ ಮಂಜುನಾಥ್, ಬಿ.ವಿ.ಆನಂದ್,ಪೋಶೆಟ್ಟಹಳ್ಳಿ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ಕಾಮಗಾನಹಳ್ಳಿ ಸುದರ್ಶನ್ ರೆಡ್ಡಿ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X